ಚಿಕ್ಕೋಡಿ: ಯಡಿಯೂರಪ್ಪ ಶ್ರೇಷ್ಠ ನಾಯಕ. ತಮ್ಮ ಬೆಳವಣಿಗೆಯಲ್ಲಿ ಅವರ ಮಾರ್ಗದರ್ಶನವಿದೆ. ಅವರು ಹೇಳಿದ ಮಾತುಗಳನ್ನು ನಾನು ಅಕ್ಷರಶಃ ಪಾಲಿಸುತ್ತೇನೆ’ನನ್ನ ಹಾಗೂ ಅವರ ಮಧ್ಯೆ ಯಾವುದೇ ಭಿನ್ನಮತ ಇಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
‘ರಾಜ್ಯ ಬಿಜೆಪಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಸುಪ್ರೀಂ. ನಿತ್ಯವೂ ಎರಡು ಬಾರಿ ಅವರೊಂದಿಗೆ ನಾನು ಮಾತುಕತೆ ನಡೆಸುತ್ತೇನೆ. ಪದಾಧಿಕಾರಿಗಳ ನೇಮಕ ಸೇರಿ ಪ್ರತಿ ವಿಷಯದಲ್ಲೂ ಅವರ ಮಾರ್ಗದರ್ಶನ ಪಡೆಯುತ್ತೇನೆ. ಎಂದರು.
ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಾಂಧಿ ಸಂಕಲ್ಪಯಾತ್ರೆಗೆ ತಾಲ್ಲೂಕಿನ ಯೆಕ್ಸಂಬಾ ಗ್ರಾಮದ ಬೀರೇಶ್ವರ ಮಂದಿರದ ಬಳಿ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.
‘ಬಿಜೆಪಿ ಅಧ್ಯಕ್ಷರಾದ ನಂತರತಮ್ಮ ಮತ್ತು ಯಡಿಯೂರಪ್ಪ ಮಧ್ಯೆ ಜಟಾಪಟಿ ನಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ಟೀಕೆ ಟಿಪ್ಪಣಿಗಳು ಬರುತ್ತಿವೆ. ನಮ್ಮ ಮಧ್ಯೆ ಜಗಳ ಹುಟ್ಟುಹಾಕುವ ಕೆಲಸ ನಡೆಯುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಯಡಿಯೂರಪ್ಪ ಶ್ರೇಷ್ಠ ನಾಯಕ. ತಮ್ಮ ಬೆಳವಣಿಗೆಯಲ್ಲಿ ಅವರ ಮಾರ್ಗದರ್ಶನವಿದೆ. ಅವರು ಹೇಳಿದ ಮಾತುಗಳನ್ನು ನಾನು ಅಕ್ಷರಶಃ ಪಾಲಿಸುತ್ತೇನೆ’ ಎಂದರು.
‘ರಾಜ್ಯದಲ್ಲಿ ನೆರೆ- ಬರದಂಥ ಸವಾಲಿನ ಕಾಲಘಟ್ಟದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದಾರೆ. ಅವರಿಗೆ ಬಲ ನೀಡುವುದು ನನ್ನ ಜವಾಬ್ದಾರಿ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದ್ದು, ಕಾರ್ಯಕರ್ತರು ಮತ್ತು ಪಕ್ಷದ ಪದಾಧಿಕಾರಿಗಳು ಎಚ್ಚರಿಕೆಯಿಂದ ಇರಬೇಕು. ಪಕ್ಷದ ವೇದಿಕೆ ಹೊರತುಪಡಿಸಿ ಬೇರೆಲ್ಲೂ ಬಹಿರಂಗ ಹೇಳಿಕೆ ನೀಡಬಾರದು’ ಎಂದು ಸೂಚಿಸಿದರು.
‘ಯಡಿಯೂರಪ್ಪ ನೇತೃತ್ವದಲ್ಲಿ ನಾನು ಹಾಗೂ ಬಿಜೆಪಿ ಸಂಸದರು ಸದ್ಯದಲ್ಲೇ ಪ್ರಧಾನಿ ಅವರನ್ನು ಭೇಟಿ ಮಾಡಿ ನೆರೆ ಪರಿಹಾರಕ್ಕೆ ಮನವಿ ಸಲ್ಲಿಸಲಿದ್ದೇವೆ’ ಎಂದು ತಿಳಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…