ಬೆಂಗಳೂರು: ಹಿಂದೆ ಸಚಿವ ಖಾತೆ ಪಡೆಯದಿದ್ದರೂ ಯಡಿಯೂರಪ್ಪ ಸಂಪುಟದಲ್ಲಿ ಪ್ರಮುಖ ಸ್ಥಾನ ಪಡೆದಿದ್ದು, ಸವಾಲುಗಳನ್ನು ಎದುರಿಸಲು ಸಿದ್ಧನಾಗಿದ್ದೇನೆ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರು ತಿಳಿಸಿದ್ದಾರೆ.
ತಮ್ಮದೇ ಆದ ಕನಸುಗಳನ್ನು ಹೊಂದಿದ್ದು, ಅವುಗಳನ್ನು ನನಸು ಮಾಡುವುದಾಗಿ ಹೇಳಿದ್ದಾರೆ. ಮೊದಲಿಗೆ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.
ಬೆಂಗಳೂರು ಅಥವಾ ಕಾರ್ಪೋರೇಷನ್ ವಿಂಗಡಣೆ ನಮ್ಮ ಪಕ್ಷ ವಿರುದ್ಧವಾಗಿದೆ. ತಂತ್ರಜ್ಞಾನವನ್ನು ಬಳಸಿಕೊಂಡು ಉತ್ತಮ ಆಡಳಿತ ನೀಡುವುದಾಗಿ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಟ್ರಾಫಿಕ್ ಪ್ರಮುಖ ಸಮಸ್ಯೆಯಾಗಿದೆ. ಮುಂದಿನ ದಿನಗಳಲ್ಲಿ ಟೆಕ್ಕಿಗಳನ್ನು ಭೇಟಿ ಮಾಡಲಾಗುವುದು,ಈ ಸಮಸ್ಯೆ ನಿವಾರಣೆಯತ್ತ ಗಮನ ಹರಿಸುವುದಾಗಿ ಹೇಳಿದರು.
ಈ ವರ್ಷ ಪಕ್ಷವನ್ನು ಸಂಘಟಿಸುವ ಮೂಲಕ ಮುಂದಿನ ಸಲ ಬಿಬಿಎಂಪಿಯಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು, ರಾಜಕಾಲುವೆಗಳು, ಘನ ತ್ಯಾಜ್ಯ ನಿರ್ವಹಣೆ, ಎಲ್ಲಾ ಬಡವರಿಗೂ ಮನೆ, ರಸ್ತೆ ಮೇಲಿನ ಗುಂಡಿಗಳನ್ನು ಮುಚ್ಚಲು ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು..
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…