ಯಡಿಯೂರಪ್ಪ ಸಿ.ಎಂ ಆಗಿ ಉಳಿಯುವರೆ ???

Featured, ರಾಜ್ಯ ನ್ಯೂಸ್

ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ರಾಜ್ಯಪಾಲರು ಅವಕಾಶ ನೀಡಿರುವ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿಕೂಟ ಸಲ್ಲಿಸಿರುವ ಅರ್ಜಿಯ ತೀರ್ಪು ಇಂದು ಹೊರಬೀಳಲಿದ್ದು ಯಡಿಯೂರಪ್ಪ ಸರ್ಕಾರ ವಿಶ್ವಾಸಮತ ಯಾಚನೆಯ ವರೆಗೂ ಉಳಿಯುವುದೆ ಎಂಬ ಸಂಶಯ ವ್ಯಕ್ತವಾಗುತ್ತಿದೆ. 

ಇಂದು ವಿಚಾರಣೆ ಆರಂಭವಾಗಲಿದೆ. ಈ ವೇಳೆ ನ್ಯಾಯಾಧೀಶರು ಕೇಳುವ ಪ್ರಶ್ನೆಗಳು ಹಾಗೂ ದಾಖಲೆಗಳನ್ನು ಒದಗಿಸಲು ಪರ ಮತ್ತು ವಿರೋಧಿಗಳ ವಕಾಲತ್ತು ವಹಿಸಿರುವ ನ್ಯಾಯಾಧೀಶರು ಸಿದ್ಧತೆ ಮಾಡಿಕೊಂಡಿದ್ದಾರೆ.

ಪ್ರಮಾಣ ವಚನ ಸಮಾರಂಭಕ್ಕೆ ಅವಕಾಶ ನೀಡಕೂಡದು’ ಎಂದು ಕೋರಿ ಕಾಂಗ್ರೆಸ್–ಜೆಡಿಎಸ್‌ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಬೆಳಗಿನ ಜಾವ 1.45ಕ್ಕೆ, ತ್ವರಿತ ವಿಚಾರಣೆಗಾಗಿ ಕೈಗೆತ್ತಿಕೊಂಡಿತ್ತು.

ನ್ಯಾಯಮೂರ್ತಿಗಳಾದ ಎ.ಕೆ. ಸಿಕ್ರಿ, ಎಸ್‌.ಎ. ಬೋಬ್ಡೆ ಹಾಗೂ ಅಶೋಕ್‌ ಭೂಷಣ್‌ ಅವರಿದ್ದ ತ್ರಿಸದಸ್ಯ ಪೀಠ ರಾಜ್ಯಪಾಲರ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಲಾಗದು’ ಎಂದು ಅಭಿಪ್ರಾಯಪಟ್ಟು, ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿತ್ತು.

ಸರ್ಕಾರ ರಚನೆಯ ಪ್ರಸ್ತಾವನೆಯೊಂದಿಗೆ ಯಡಿಯೂರಪ್ಪ ಅವರು ರಾಜ್ಯಪಾಲರಿಗೆ ಸಲ್ಲಿಸಿರುವ ಶಾಸಕರ ಬೆಂಬಲದ ಪತ್ರದ ಪ್ರತಿಯನ್ನು ಹಾಜರುಪಡಿಸುವಂತೆ ಸೂಚಿಸಿತ್ತು.