ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ರಾಜ್ಯಪಾಲರು ಅವಕಾಶ ನೀಡಿರುವ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್–ಜೆಡಿಎಸ್ ಮೈತ್ರಿಕೂಟ ಸಲ್ಲಿಸಿರುವ ಅರ್ಜಿಯ ತೀರ್ಪು ಇಂದು ಹೊರಬೀಳಲಿದ್ದು ಯಡಿಯೂರಪ್ಪ ಸರ್ಕಾರ ವಿಶ್ವಾಸಮತ ಯಾಚನೆಯ ವರೆಗೂ ಉಳಿಯುವುದೆ ಎಂಬ ಸಂಶಯ ವ್ಯಕ್ತವಾಗುತ್ತಿದೆ.
ಇಂದು ವಿಚಾರಣೆ ಆರಂಭವಾಗಲಿದೆ. ಈ ವೇಳೆ ನ್ಯಾಯಾಧೀಶರು ಕೇಳುವ ಪ್ರಶ್ನೆಗಳು ಹಾಗೂ ದಾಖಲೆಗಳನ್ನು ಒದಗಿಸಲು ಪರ ಮತ್ತು ವಿರೋಧಿಗಳ ವಕಾಲತ್ತು ವಹಿಸಿರುವ ನ್ಯಾಯಾಧೀಶರು ಸಿದ್ಧತೆ ಮಾಡಿಕೊಂಡಿದ್ದಾರೆ.
ಪ್ರಮಾಣ ವಚನ ಸಮಾರಂಭಕ್ಕೆ ಅವಕಾಶ ನೀಡಕೂಡದು’ ಎಂದು ಕೋರಿ ಕಾಂಗ್ರೆಸ್–ಜೆಡಿಎಸ್ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಬೆಳಗಿನ ಜಾವ 1.45ಕ್ಕೆ, ತ್ವರಿತ ವಿಚಾರಣೆಗಾಗಿ ಕೈಗೆತ್ತಿಕೊಂಡಿತ್ತು.
ನ್ಯಾಯಮೂರ್ತಿಗಳಾದ ಎ.ಕೆ. ಸಿಕ್ರಿ, ಎಸ್.ಎ. ಬೋಬ್ಡೆ ಹಾಗೂ ಅಶೋಕ್ ಭೂಷಣ್ ಅವರಿದ್ದ ತ್ರಿಸದಸ್ಯ ಪೀಠ ರಾಜ್ಯಪಾಲರ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಲಾಗದು’ ಎಂದು ಅಭಿಪ್ರಾಯಪಟ್ಟು, ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿತ್ತು.
ಸರ್ಕಾರ ರಚನೆಯ ಪ್ರಸ್ತಾವನೆಯೊಂದಿಗೆ ಯಡಿಯೂರಪ್ಪ ಅವರು ರಾಜ್ಯಪಾಲರಿಗೆ ಸಲ್ಲಿಸಿರುವ ಶಾಸಕರ ಬೆಂಬಲದ ಪತ್ರದ ಪ್ರತಿಯನ್ನು ಹಾಜರುಪಡಿಸುವಂತೆ ಸೂಚಿಸಿತ್ತು.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…