Featured

ಯಡಿಯೂರಪ್ಪ ಹುಚ್ಚಾಸ್ಪತ್ರೆಯ ಪ್ರಮುಖ ವಾರ್ಡ್‌ನಲ್ಲಿ ಇರಬೇಕಿತ್ತು,ಅವರಿಂದಲೇ ಈ ವಿಧಾನಸೌಧ ಹುಚ್ಚಾಸ್ಪತ್ರೆಯಂತಾಗಿದೆ : ವಾಟಾಳ್ ನಾಗರಾಜ್ -Vishwanews24

ಯಡಿಯೂರಪ್ಪ ಹುಚ್ಚಾಸ್ಪತ್ರೆಯ ಪ್ರಮುಖ ವಾರ್ಡ್‌ನಲ್ಲಿ ಇರಬೇಕಿತ್ತು, ಅವರಿಂದಲೇ ಈ ವಿಧಾನಸೌಧ ಹುಚ್ಚಾಸ್ಪತ್ರೆಯಂತಾಗಿದೆ : ವಾಟಾಳ್ ನಾಗರಾಜ್ -Vishwanews24

6 ನೇ ತಾರೀಖು ರಾಜ್ಯಾದ್ಯಂತ ರೈಲು ತಡೆ ಚಳವಳಿ..

ರಾಮನಗರ: ಯಡಿಯೂರಪ್ಪಗೆ ಬುದ್ಧಿ, ತಲೆ ಎರಡೂ ಇಲ್ಲ. ಯಡಿಯೂರಪ್ಪ ಹುಚ್ಚಾಸ್ಪತ್ರೆಯ ಪ್ರಮುಖ ವಾರ್ಡ್‌ನಲ್ಲಿ ಇರಬೇಕಿತ್ತು. ಆದರೆ ದುರಾದೃಷ್ಟವಶಾತ್ ವಿಧಾನಸೌಧದಲ್ಲಿದ್ದಾರೆ. ಅವರಿಂದಲೇ ಈ ವಿಧಾನಸೌಧ ಹುಚ್ಚಾಸ್ಪತ್ರೆಯಂತಾಗಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.

ಮರಾಠ ಪ್ರಾಧಿಕಾರ ರಚನೆಯನ್ನು ವಿರೋಧಿಸಿ ಕನ್ನಡಪರ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ರಾಮನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತು ರಾಜ್ಯ ಸರ್ಕಾರ ಹಾಗೂ ಸಿಎಂ ಯಡಿಯೂರಪ್ಪ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು. ಇದೇ 6 ನೇ ತಾರೀಖು ರಾಜ್ಯಾದ್ಯಂತ ರೈಲು ತಡೆ ಚಳವಳಿಯನ್ನ ಮಾಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಯಡಿಯೂರಪ್ಪನವರು ಅಲಮ್ಮಪ್ರಭುಗಳ ಅನುಭವ ಮಂಟಪಕ್ಕೆ ಶಂಕುಸ್ಥಾಪನೆ ಮಾಡಲು ಹೊರಟ್ಟಿದ್ದಾರೆ. ಆದರೆ ಅದು ಅಲ್ಲಮ್ಮಪ್ರಭುಗಳ ಅನುಭವ ಮಂಟಪವಲ್ಲ, ಬದಲಾಗಿ ಅದು ಯಡಿಯೂರಪ್ಪನವರ ಅನುಭವ ಮಂಟಪವಾಗುತ್ತದೆ. ಇದು ಕೇವಲ ರಾಜಕೀಯಕ್ಕಾಗಿ ಮಾಡಲು ಹೊರಟ್ಟಿದ್ದಾರೆ. ಹಾಗಾಗಿ ಸಿಎಂ ಯಡಿಯೂರಪ್ಪ ಇದನ್ನೆಲ್ಲ ಬಿಡಬೇಕೆಂದು ಒತ್ತಾಯಿಸಿದರು.

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದಾರೆ. ಆದರೆ ಅವರಿಂದ ಹಾಗೂ ಸರ್ಕಾರದ ಮಂತ್ರಿಗಳಿಂದ ಜನಪರವಾದ ಯಾವುದೇ ಕೆಲಸಗಳು ಆಗುತ್ತಿಲ್ಲವೆಂದು ವಾಟಾಳ್ ನಾಗರಾಜ್ ಆಕ್ರೋಶವ್ಯಕ್ತಪಡಿಸಿದರು. ಇನ್ನು ಯಡಿಯೂರಪ್ಪ ಸರ್ಕಾರದ ಮಂತ್ರಿಮಂಡಲ ಸಂಪೂರ್ಣವಾಗಿ ಕುಲಗಟ್ಟಿದೆ, ಯಾರು ಸಹ ಸಾಮಾನ್ಯ ಜನರ ಬಗ್ಗೆ ಕಾಳಜಿವಹಿಸುತ್ತಿಲ್ಲ. ಕೇವಲ ರಾಜಕೀಯವಾಗಿ ಆರೋಪ ಪ್ರತ್ಯಾರೋಪಗಳನ್ನ ಮಾಡಿಕೊಂಡು ಕಾಲಕಳೆಯುತ್ತಿದ್ದಾರೆಂದು ಕಿಡಿಕಾರಿದರು.

http://ಮುಂದಿನ ದಿನಗಳಲ್ಲಿ ನಿಜವಾದ ರಾಜಕಾರಣ ಆರಂಭವಾಗಲಿದೆ : ನಿಖಿಲ್ ಕುಮಾರಸ್ವಾಮಿ -Vshwanews24

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

24 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

24 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago