ಬೆಳಗಾವಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗಲೂ ನಮ್ಮ ತಂಡದಲ್ಲಿಯೇ ಇದ್ದಾರೆ. ಅವರ ಬಾಯಿ ಮುಚ್ಚಿಸಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಯತ್ನಾಳ್ ಮಾತಿನ ಭರದಲ್ಲಿ ಏನೇನೂ ಮಾತನಾಡುತ್ತಾರೆ. ಅವರ ಮಾತಿನಲ್ಲಿ ಯಾವುದೇ ದ್ವೇಷ ಹಾಗೂ ಕೆಟ್ಟ ಭಾವನೆ ಇಲ್ಲ. ಮಾತನಾಡುವುದು ಅವರ ಹುಟ್ಟು ಗುಣ. ಯಾರನ್ನೂ ಬೈಯದಂತೆ, ಪಕ್ಷಕ್ಕೆ ಮುಜುಗುರ ಆಗುವ ರೀತಿ ಮಾತನಾಡದಂತೆ ಮನವಿ ಮಾಡಿದ್ದೇವೆ. ಹುಬ್ಬಳ್ಳಿಯಲ್ಲಿ ಯತ್ನಾಳ್ ಮಾತನಾಡಿದ್ದು ತಪ್ಪಿದೆ. ಅದರ ಅರ್ಥ ಬೇರೆ ಇದೆ, ತಪ್ಪು ಕಲ್ಪನೆ ಬೇಡ ಎಂದರು.
ಯತ್ನಾಳ್ ಬೇರೆ ಪಕ್ಷ ಕಟ್ಟುವುದಿಲ್ಲ. ಅವರು ಬಿಜೆಪಿ ನಾಯಕರನ್ನು ಬೈಯುತ್ತಿಲ್ಲ, ಒಂದೇ ಕುಟುಂಬದ ಬಗ್ಗೆ ಮಾತನಾಡುತ್ತಿದ್ದಾರೆ. ಸಂಘಟನೆ ಮಾಡಿ ಮುಂದೆ ಸಾಗುವಂತೆ ಹೇಳಿದ್ದೇವೆ. ತಂದೆ ಹಾಗೂ ಮಗನ ಬಗ್ಗೆಯೂ ಮಾತನಾಡಬೇಡ ಎಂದು ಹೇಳಿದ್ದೇನೆ. ಸಂಘಟನೆ ಮಾಡುವುದನ್ನು ಬಿಟ್ಟು ಬೇರೆ ವಿಚಾರ ಮಾತನಾಡ ಬೇಡ ಎಂದು ಮನವಿ ಮಾಡಿದ್ದೇನೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…