ಬೆಳಗಾವಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗಲೂ ನಮ್ಮ ತಂಡದಲ್ಲಿಯೇ ಇದ್ದಾರೆ. ಅವರ ಬಾಯಿ ಮುಚ್ಚಿಸಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಯತ್ನಾಳ್ ಮಾತಿನ ಭರದಲ್ಲಿ ಏನೇನೂ ಮಾತನಾಡುತ್ತಾರೆ. ಅವರ ಮಾತಿನಲ್ಲಿ ಯಾವುದೇ ದ್ವೇಷ ಹಾಗೂ ಕೆಟ್ಟ ಭಾವನೆ ಇಲ್ಲ. ಮಾತನಾಡುವುದು ಅವರ ಹುಟ್ಟು ಗುಣ. ಯಾರನ್ನೂ ಬೈಯದಂತೆ, ಪಕ್ಷಕ್ಕೆ ಮುಜುಗುರ ಆಗುವ ರೀತಿ ಮಾತನಾಡದಂತೆ ಮನವಿ ಮಾಡಿದ್ದೇವೆ. ಹುಬ್ಬಳ್ಳಿಯಲ್ಲಿ ಯತ್ನಾಳ್ ಮಾತನಾಡಿದ್ದು ತಪ್ಪಿದೆ. ಅದರ ಅರ್ಥ ಬೇರೆ ಇದೆ, ತಪ್ಪು ಕಲ್ಪನೆ ಬೇಡ ಎಂದರು.
ಯತ್ನಾಳ್ ಬೇರೆ ಪಕ್ಷ ಕಟ್ಟುವುದಿಲ್ಲ. ಅವರು ಬಿಜೆಪಿ ನಾಯಕರನ್ನು ಬೈಯುತ್ತಿಲ್ಲ, ಒಂದೇ ಕುಟುಂಬದ ಬಗ್ಗೆ ಮಾತನಾಡುತ್ತಿದ್ದಾರೆ. ಸಂಘಟನೆ ಮಾಡಿ ಮುಂದೆ ಸಾಗುವಂತೆ ಹೇಳಿದ್ದೇವೆ. ತಂದೆ ಹಾಗೂ ಮಗನ ಬಗ್ಗೆಯೂ ಮಾತನಾಡಬೇಡ ಎಂದು ಹೇಳಿದ್ದೇನೆ. ಸಂಘಟನೆ ಮಾಡುವುದನ್ನು ಬಿಟ್ಟು ಬೇರೆ ವಿಚಾರ ಮಾತನಾಡ ಬೇಡ ಎಂದು ಮನವಿ ಮಾಡಿದ್ದೇನೆ ಎಂದರು.
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…