ಯತ್ನಾಳ್, ಜಾರಕಿಹೊಳಿ ತಂಡಕ್ಕೆ ಬ್ರೇಕ್ ಹಾಕಿ: ಅಮಿತ್‌ ಶಾಗೆ ವಿಜಯೇಂದ್ರ ಮನವಿ – vishwanews24

Featured, ರಾಜ್ಯ ನ್ಯೂಸ್

ಯತ್ನಾಳ್, ಜಾರಕಿಹೊಳಿ ತಂಡಕ್ಕೆ ಬ್ರೇಕ್ ಹಾಕುವಂತೆ ಅಮಿತ್ ಶಾಗೆ ವಿಜಯೇಂದ್ರ ಮನವಿ

ಬೆಂಗಳೂರು : ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ತಂಡಕ್ಕೆ ಬ್ರೇಕ್ ಹಾಕುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಮನವಿ ಮಾಡಿಕೊಂಡಿದ್ದಾರೆ.

ಬುಧವಾರ ರಾತ್ರಿ ವಿಜಯೇಂದ್ರ ಅವರು ಅಮಿತ್ ಶಾ ಅವರನ್ನು ಭೇಟಿಯಾಗಿದ್ದು, ಈ ವೇಳೆ ಇತ್ತೀಚೆಗೆ ಪಕ್ಷದಲ್ಲಿ ಉಲ್ಬಣಗೊಂಡಿರುವ ಆಂತರಿಕ ಕಲಹದ ಬಗ್ಗೆ ಅವರಿಗೆ ದೂರು ನೀಡಿದ್ದಾರೆ. ಇದೇ ವೇಳೆ, ರಾಜ್ಯದಲ್ಲಿ ಕಳೆದೊಂದು ವರ್ಷದ ಪಕ್ಷ ಸಂಘಟನೆ, ಹೋರಾಟ ಕುರಿತು ರಿಪೋರ್ಟ್ ಸಲ್ಲಿಸಿದ್ದಾರೆ.

ಉಡುಪಿ : ಸ್ಟಾಕ್ ಮಾರ್ಕೆಟ್‌ನಲ್ಲಿ ಹೆಚ್ಚಿನ ಲಾಭಾಂಶದ ಆಮಿಷ: ಆನ್‌ಲೈನ್‌ನಲ್ಲಿ 49 ಲಕ್ಷ ರೂ. ಹಣ ಕಳೆದುಕೊಂಡ ಯುವಕ – vishwanews24

ತಮ್ಮ ಒಂದು ವರ್ಷದ ಸಾಧನೆಯ ವರದಿ ಕೊಡುವ ಮೂಲಕ ಕುತೂಹಲ ಹುಟ್ಟಿಸಿದ್ದಾರೆ. ಯತ್ನಾಳ್ ತಂಡದ 2ನೇ ಹಂತದ ವಕ್ಫ್ ಹೋರಾಟ ವಿಚಾರವನ್ನು ಅವರು ಹೈಕಮಾಂಡ್ ಗಮನಕ್ಕೆ ತಂದರು. ಈ ವರ್ಷಾರಂಭದಿಂದ ಪಕ್ಷದ ವತಿಯಿಂದ ಕೈಗೊಳ್ಳಲಿರುವ ಹೋರಾಟಗಳ ಬಗ್ಗೆ ಪ್ರತ್ಯೇಕ ವರದಿ ಕೂಡ ಸಲ್ಲಿಸಿದ್ದಾರೆ. ಜೊತೆಗೆ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಪ್ರಕರಣದಲ್ಲಿ ಬಿಜೆಪಿಯ ಹೋರಾಟ, ಕಲಬುರ್ಗಿ ಪ್ರತಿಭಟನೆ, ಬಾಣಂತಿಯರ ಸರಣಿ ಸಾವು ಪ್ರಕರಣದಲ್ಲಿ ಸರ್ಕಾರದ ಲೋಪಗಳು, ನಿರ್ಲಕ್ಷ್ಯ, ಬಿಜೆಪಿ ಹೋರಾಟ ಕುರಿತು ತಿಳಿಸಿದ್ದಾರೆ.

ಬೆಂಗಳೂರು: ಯಮಹಾ ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ ; 50ಕ್ಕೂ ಹೆಚ್ಚು ಬೈಕ್‍ಗಳು ಸುಟ್ಟು ಭಸ್ಮ – vishwanews24

Leave a Reply