ಬೆಂಗಳೂರು : ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ತಂಡಕ್ಕೆ ಬ್ರೇಕ್ ಹಾಕುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಮನವಿ ಮಾಡಿಕೊಂಡಿದ್ದಾರೆ.
ಬುಧವಾರ ರಾತ್ರಿ ವಿಜಯೇಂದ್ರ ಅವರು ಅಮಿತ್ ಶಾ ಅವರನ್ನು ಭೇಟಿಯಾಗಿದ್ದು, ಈ ವೇಳೆ ಇತ್ತೀಚೆಗೆ ಪಕ್ಷದಲ್ಲಿ ಉಲ್ಬಣಗೊಂಡಿರುವ ಆಂತರಿಕ ಕಲಹದ ಬಗ್ಗೆ ಅವರಿಗೆ ದೂರು ನೀಡಿದ್ದಾರೆ. ಇದೇ ವೇಳೆ, ರಾಜ್ಯದಲ್ಲಿ ಕಳೆದೊಂದು ವರ್ಷದ ಪಕ್ಷ ಸಂಘಟನೆ, ಹೋರಾಟ ಕುರಿತು ರಿಪೋರ್ಟ್ ಸಲ್ಲಿಸಿದ್ದಾರೆ.
ತಮ್ಮ ಒಂದು ವರ್ಷದ ಸಾಧನೆಯ ವರದಿ ಕೊಡುವ ಮೂಲಕ ಕುತೂಹಲ ಹುಟ್ಟಿಸಿದ್ದಾರೆ. ಯತ್ನಾಳ್ ತಂಡದ 2ನೇ ಹಂತದ ವಕ್ಫ್ ಹೋರಾಟ ವಿಚಾರವನ್ನು ಅವರು ಹೈಕಮಾಂಡ್ ಗಮನಕ್ಕೆ ತಂದರು. ಈ ವರ್ಷಾರಂಭದಿಂದ ಪಕ್ಷದ ವತಿಯಿಂದ ಕೈಗೊಳ್ಳಲಿರುವ ಹೋರಾಟಗಳ ಬಗ್ಗೆ ಪ್ರತ್ಯೇಕ ವರದಿ ಕೂಡ ಸಲ್ಲಿಸಿದ್ದಾರೆ. ಜೊತೆಗೆ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಪ್ರಕರಣದಲ್ಲಿ ಬಿಜೆಪಿಯ ಹೋರಾಟ, ಕಲಬುರ್ಗಿ ಪ್ರತಿಭಟನೆ, ಬಾಣಂತಿಯರ ಸರಣಿ ಸಾವು ಪ್ರಕರಣದಲ್ಲಿ ಸರ್ಕಾರದ ಲೋಪಗಳು, ನಿರ್ಲಕ್ಷ್ಯ, ಬಿಜೆಪಿ ಹೋರಾಟ ಕುರಿತು ತಿಳಿಸಿದ್ದಾರೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…