Featured

ಯದುವೀರ್  ಟಿಕೆಟ್ ಕೊಡುವುದು ನಿಜವಾದರೆ ಅದನ್ನು ಸ್ವಾಗತಿಸುತ್ತೇನೆ, ಕಾರ್ಯಕರ್ತನಾಗಿ ಅವರ ಪರ ಕೆಲಸ ಮಾಡುತ್ತೇನೆ : ಪ್ರತಾಪ್‌ ಸಿಂಹ – Vishwanews24

ಯದುವೀರ್  ಟಿಕೆಟ್ ಕೊಡುವುದು ನಿಜವಾದರೆ ಅದನ್ನು ಸ್ವಾಗತಿಸುತ್ತೇನೆ. ಕಾರ್ಯಕರ್ತನಾಗಿ ಅವರ ಪರ ಕೆಲಸ ಮಾಡುತ್ತೇನೆ : ಪ್ರತಾಪ್‌ ಸಿಂಹ

ಮೈಸೂರು: ಯದುವೀರ್  ಟಿಕೆಟ್ ಕೊಡುವುದು ನಿಜವಾದದರೆ ಅದನ್ನು ಸ್ವಾಗತಿಸುತ್ತೇನೆ. ಕಾರ್ಯಕರ್ತನಾಗಿ ಅವರ ಪರ ಕೆಲಸ ಮಾಡುತ್ತೇನೆ ಎಂದು ಸಂಸದ ಪ್ರತಾಪ್‌ ಸಿಂಹ  ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಮನೆಯ ಎಸಿ ರೂಂನಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕುಲು ಯದುವೀರ್ ಬಂದರೆ ಸ್ವಾಗತಿಸದೆ ಇರುವುದಕ್ಕೆ ಆಗುತ್ತಾ?. ರಾಜ – ಪ್ರಜೆ ನಡುವೆ ವ್ಯತ್ಯಾಸ ತೆಗೆದು ರಾಜರೇ ಪ್ರಜೆಗಳ ಜೊತೆ ಇರಲು ಬಂದರೆ ನನ್ನ ಸ್ವಾಗತ. ಅರಮನೆ ಆಸ್ತಿ ವಿಚಾರದಲ್ಲಿ ಸರ್ಕಾರದ ನಡುವೆ ವ್ಯಾಜ್ಯಗಳಿವೆ. ಅದರಲ್ಲಿ ಬಹುತೇಕ ಆಸ್ತಿಗಳು ಸಾರ್ವಜನಿಕರ ಬಳಕೆಯಲ್ಲಿವೆ. ಯದುವೀರ್ ಜನಪ್ರತಿನಿಧಿ ಆಗಿ ಅದನ್ನೆಲ್ಲಾ ಜನರಿಗೆ ಬಿಟ್ಟು ಕೊಡಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಹೋರಾಡಲು ರಾಜರು ಬೀದಿಗೆ ಬಂದ್ರೆ ಸಂತೋಷ: ಚಾಮುಂಡಿ ಬೆಟ್ಟದ ಮೇಲಿನ ಅರಮನೆ ಆವರಣದ ಒಳಗೆ ಪೈಪ್ ಲೈನ್ ಹಾಕಲು ಅರಮನೆ ವಿರೋಧಿಸಿದೆ. ಯದುವೀರ್ ಜನಪ್ರತಿನಿಧಿ ಆದರೆ ಆ ಸಮಸ್ಯೆ ಬಗೆಹರಿಯುತ್ತೆ. ಶ್ರೀ ರಾಜೇಂದ್ರ ಸ್ವಾಮೀಜಿ ಪ್ರತಿಮೆ ವಿಚಾರದಲ್ಲಿ ಅರಮನೆಯವರ ನ್ಯಾಯಾಲಯಕ್ಕೆ ಹೋಗಿದ್ದಾರೆ. ಯದುವೀರ್ ಈ ಸಮಸ್ಯೆ ಬಗೆಹರಿಸಿ ರಾಜೇಂದ್ರ ಶ್ರೀಗಳ ಪ್ರತಿಮೆ ಅನಾವರಣ ಮಾಡುತ್ತಾರೆ. ಅರಮನೆ ಒಳಗೆ ಆರಾಮಾಗಿ ಇದ್ದಂತ ವ್ಯಕ್ತಿ ಸಿದ್ದರಾಮಯ್ಯ ವಿರುದ್ಧ ಹೋರಾಟ ಮಾಡಲು ಬೀದಿಗೆ ಬಂದರೆ ನಮಗೆ ಸಂತೋಷ ಎಂದು ಹೇಳಿದರು.

ಮುಖಂಡರಿಗೆ ಸಿಂಹ ಧನ್ಯವಾದ: ಅರಮನೆ ವೈಭೋಗ ಬೇಕಾಗಿಲ್ಲ. ಜನರ ಜೊತೆ ಹೋರಾಟಕ್ಕೆ ಬರ್ತಿನಿ ಅಂತಾ ಹೊರಟಿದ್ದಾರೆ, ಅದಕ್ಕೆ ಸ್ವಾಗತ. ಪೊಲೀಸ್ ಠಾಣೆಗೆ ಬಂದು ನಮ್ಮ ಕಾರ್ಯಕರ್ತರ ಸಮಸ್ಯೆ ಬಗೆಹರಿಸಲು ರಾಜರು ಬಂದರೆ ಸಂತೋಷ ಅಲ್ವಾ?. ಸುಖದ ಸುಪತ್ತಿಗೆಯಲ್ಲಿ ಇದ್ದ ನಮ್ಮ ಮಹಾರಾಜರನ್ನು ಮನವೊಲಿಸಿ ರಾಜಕೀಯಕ್ಕೆ ತಂದ ನಮ್ಮ ಮುಖಂಡರಿಗೆ ಧನ್ಯವಾದ ಎಂದು ಸಿಂಹ ತಿಳಿಸಿದರು.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago