ಬೆಂಗಳೂರು: ಪಕ್ಷದ ಚಟುವಟಿಕೆ ಹಾಗು ಸಂಘಟನೆಯಲ್ಲಿ ನಿಷ್ಕ್ರಿಯತೆ ತೋರಿಸಿದ್ದಾರೆ ಎಂಬ ಕಾರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ.
ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿಲ್ಲ, ನೋಟೀಸು ನೀಡಿದ್ದಕ್ಕೆ ಉತ್ತರ ನೀಡಿಲ್ಲ ಹಾಗು ಪಕ್ಷದ ಸಭೆಗಳಿಗೆ ಹಾಜರಾಗುತ್ತಿಲ್ಲ ಎಂಬ ಕಾರಣಗಳಿಗಾಗಿ ಮಿಥುನ್ ರೈ ಸಹಿತ ರಾಜ್ಯದ 10 ಜಿಲ್ಲೆಗಳ ಯುವ ಕಾಂಗ್ರೆಸ್ ಅಧ್ಯಕ್ಷರನ್ನು, ರಾಜ್ಯ ಯುವ ಕಾಂಗ್ರೆಸ್ ನ ಎಂಟು ಮಂದಿ ಕಾರ್ಯದರ್ಶಿಗಳನ್ನು ಹಾಗು ರಾಜ್ಯ ಯುವ ಕಾಂಗ್ರೆಸ್ ನ ಒಬ್ಬ ಉಪಾಧ್ಯಕ್ಷರನ್ನು ಅಮಾನತು ಮಾಡಲಾಗಿದೆ ಎಂದು ರವೀಂದ್ರದಾಸ್ ತಿಳಿಸಿದ್ದಾರೆ.
ಮಿಥುನ್ ರೈ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೂಡಬಿದ್ರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅಲ್ಲಿಂದ ಮಾಜಿ ಸಚಿವ ಅಭಯಚಂದ್ರ ಅವರಿಗೇ ಪಕ್ಷ ಮತ್ತೆ ಅವಕಾಶ ನೀಡಿತ್ತು. ಆದರೆ ಮೂಡಬಿದ್ರೆಯಿಂದ ಸ್ಪರ್ಧಿಸಲು ಸಾಕಷ್ಟು ತಯಾರಿ ಮಾಡಿಕೊಂಡಿದ್ದ ಮಿಥುನ್ ರೈ ಇದರಿಂದ ಬೇಸರಿಸಿಕೊಂಡಿದ್ದರು. ಇದೀಗ ಪಕ್ಷದ ಸಂಘಟನೆ ಮಾಡಬೇಕಾದ ಯುವ ಘಟಕವೇ ನಿಷ್ಕ್ರಿಯವಾಗಿದೆ ಎಂದು ಅವರನ್ನು ಹುದ್ದೆಯಿಂದ ಅಮಾನತು ಮಾಡಲಾಗಿದೆ..
‘ಪಕ್ಷ ಸಂಘಟನೆ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ ಕಾರಣಕ್ಕೆ ಹಲವು ಬಾರಿ ನೋಟಿಸ್ ನೀಡಿದರೂ ಇವರು ಉತ್ತರಿಸಿಲ್ಲ. ಹೀಗಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಅಮಾನತು ಆದೇಶದಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೀಂದ್ರದಾಸ್ ಸ್ಪಷ್ಟಪಡಿಸಿದ್ದಾರೆ.
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…
ರಾಮಮಂದಿರ ವಿರೋಧಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ : ಯೋಗಿ ಆದಿತ್ಯನಾಥ್ ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು…
ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…
ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್ಕಾರ್ಟ್ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್ಲೈನ್ನಲ್ಲಿ ಲಕ್ಷಾಂತರ…
ಕೇಂದ್ರದ ಭರವಸೆಯ ಬಳಿಕ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್ನ ಸಾಮಾಜಿಕ ಕಾರ್ಯಕರ್ತ…
ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…