Featured

ಯಶವಂತಪುರ ಮತ್ತು ಮಂಗಳೂರು ವಂದೇ ಭಾರತ್‌ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ವಂದೇ ಭಾರತ್‌ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ.. ನಿಗದಿತ ಸಮಯಕ್ಕೂ ಮುಂಚಿತ ತಲುಪಿದ ರೈಲು

ಮಂಗಳೂರು / ಪುತ್ತೂರು: ಯಶವಂತಪುರ ಮತ್ತು ಮಂಗಳೂರು ಜಂಕ್ಷನ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ.

ಸೆ. 5ರಂದು ನಡೆದ ಮೊದಲ ಪ್ರಾಯೋಗಿಕ ಸಂಚಾರದಲ್ಲಿ ತಾಂತ್ರಿಕ ದೋಷ ಕಂಡುಬಂದು ರೈಲು ಸುಮಾರು ಎರಡು ತಾಸು ವಿಳಂಬವಾಗಿ ಮಂಗಳೂರು ತಲುಪಿತ್ತು. ಹೀಗಾಗಿ, ಈ ಬಾರಿ ನೈಋತ್ಯ ರೈಲ್ವೆಯು ಪ್ರಾಯೋಗಿಕ ಸಂಚಾರವನ್ನು ಮಂಗಳೂರು ಸೆಂಟ್ರಲ್ ಬದಲಿಗೆ ಮಂಗಳೂರು ಜಂಕ್ಷನ್‌ಗಷ್ಟೇ ಮಿತಿಗೊಳಿಸಿತ್ತು.

ಯಶವಂತಪುರದಿಂದ ಬೆಳಗ್ಗೆ 6.50ಕ್ಕೆ ಹೊರಟ ರೈಲು, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್ ಹಾಗೂ ಕಬಕ ಪುತ್ತೂರು ಮಾರ್ಗವಾಗಿ ಅಪರಾಹ್ನ 2.50ಕ್ಕೆ ಮಂಗಳೂರು ಜಂಕ್ಷನ್ ತಲುಪಬೇಕಿತ್ತು. ಆದರೆ, ನಿಗದಿತ ಸಮಯಕ್ಕಿಂತ 55 ನಿಮಿಷ ಮುಂಚಿತವಾಗಿ ರೈಲು ಅಪರಾಹ್ನ 1.55ಕ್ಕೆ ಮಂಗಳೂರು ಜಂಕ್ಷನ್ ತಲುಪಿದೆ.

ಪುತ್ತೂರು ನಿಲ್ದಾಣದಲ್ಲಿ ಸ್ವಾಗತಕ್ಕೆ ಸೇರಿದ್ದ ಜನ
ವಂದೇ ಭಾರತ್ ರೈಲಿಗೆ ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ನಿಲುಗಡೆ ನೀಡಬೇಕು ಎನ್ನುವ ಹಕ್ಕೊತ್ತಾಯ ಕೇಳಿಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಬುಧವಾರ ಪ್ರಾಯೋಗಿಕ ಸಂಚಾರದ ಸಂದರ್ಭ ಪುತ್ತೂರಿನಲ್ಲಿ ನಿಲುಗಡೆ ನೀಡಲಾಗುತ್ತದೆ ಎಂಬ ಮಾಹಿತಿ ಹರಿದಾಡಿತ್ತು. ಬೆಂಗಳೂರಿನಿಂದ ಆಗಮಿಸುವ ಸಂದರ್ಭ ಪುತ್ತೂರು ನಿಲ್ದಾಣದಲ್ಲಿ ಬಳಿ ನಿಧಾನವಾಗಿ ಸಂಚರಿಸಿ ಬಳಿಕ ಮತ್ತೆ ಬೆಂಗಳೂರಿಗೆ ತೆರಳುವ ಸಂದರ್ಭ ನಿಲ್ಲಿಸದೆ ನೇರವಾಗಿ ಸಾಗಿದೆ ಎನ್ನಲಾಗಿದೆ.

ಪುತ್ತೂರು ನಿಲ್ದಾಣದಲ್ಲಿ 2 ನಿಮಿಷಗಳ ಕಾಲ ನಿಲುಗಡೆ ನೀಡಲಾಗುತ್ತದೆ ಎಂಬ ಮಾಹಿತಿ ಹರಡಿದ್ದ ಹಿನ್ನೆಲೆಯಲ್ಲಿ ಒಂದಷ್ಟು ಮುಖಂಡರು, ಬಳಕೆದಾರರು, ಹೋರಾಟಗಾರರು ಸೇರಿದ್ದರು. ಆದರೆ ಬುಧವಾರ ಅಪರಾಹ್ನ ನಿಗದಿತ ಸಮಯಕ್ಕಿಂತ ಸುಮಾರು ಅರ್ಧ ಗಂಟೆ (1.12ಕ್ಕೆ) ಮುಂಚೆಯೇ ರೈಲು ಪುತ್ತೂರು ನಿಲ್ದಾಣದ ಮೂಲಕ ಸಾಗಿದೆ. ಮಂಗಳೂರಿಗೆ ತೆರಳಿ ಮರಳಿ ಮತ್ತೆ 3.15ರ ಸಮಯದಲ್ಲಿ ಪುತ್ತೂರು ನಿಲ್ದಾಣದ ಮೂಲಕ ಸಾಗಿದೆ.

Vishwa News 24

Recent Posts

ಬ್ರಿಟಿಷರಿಂದ ಪಿಂಚಣಿ ಪಡೆಯುತ್ತಿದ್ದವರಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಾಗಿಲ್ಲ : ಪ್ರಿಯಾಂಕ್ ಖರ್ಗೆ ವಾಗ್ದಾಳಿ – vishwanews24

ಗಾಂಧೀಜಿ, ಪಟೇಲ್‌, ನೆಹರೂ, ಬೋಸ್‌ಗಿಂತ ಬಿಜೆಪಿಯವರು ದೊಡ್ಡವರೇ? : ಪ್ರಿಯಾಂಕ್‌ ಕಿಡಿ ಬೆಂಗಳೂರು: ರಾಷ್ಟ್ರಗೀತೆ ವಂದೇ ಮಾತರಂ ಗಾಯನ ಹಾಗೂ…

4 minutes ago

ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಗತವೈಭವ ತರುವುದೊಂದೇ ನನ್ನ ಉದ್ದೇಶ : ನೂತನ ಅಧ್ಯಕ್ಷ ಪದ್ಮರಾಜ್ ಆರ್ ಪೂಜಾರಿ – vishwanews24

ದ.ಕ. ಜಿಲ್ಲೆಯ 8ಕ್ಕೆ 8 ಕ್ಷೇತ್ರವನ್ನೂ ಗೆಲ್ಲಿಸುವ ಹೊಣೆಗಾರಿಕೆ ನನ್ನದು: ನೂತನ ಅಧ್ಯಕ್ಷ ಪದ್ಮರಾಜ್ ಆರ್ ಪೂಜಾರಿ ಮಂಗಳೂರು: ಈ…

19 minutes ago

ಮುಲ್ಕಿ : ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ಕುಖ್ಯಾತ ಅಂತರ ಜಿಲ್ಲಾ ಆರೋಪಿಗಳ ಬಂಧನ – vishwanews24

ಮುಲ್ಕಿ : ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ: ಕುಖ್ಯಾತ ಅಂತರ ಜಿಲ್ಲಾ ಆರೋಪಿಗಳ ಬಂಧನ ₹17.20 ಲಕ್ಷ ಮೌಲ್ಯದ ಚಿನ್ನ,…

51 minutes ago

ರಾಜ್ಯದಲ್ಲಿ ತಾಪಮಾನ ಏರಿಕೆ: ಡೆಂಗ್ಯೂ, ಹೀಟ್‌ಸ್ಟ್ರೋಕ್ ಭೀತಿಗೆ ಆರೋಗ್ಯ ಇಲಾಖೆ ಅಲರ್ಟ್ – vishwanews24

ರಾಜ್ಯದಲ್ಲಿ ಹವಾಮಾನ ವೈಪರೀತ್ಯ ; ತಾಪಮಾನ ಏರಿಕೆ ಡೆಂಗ್ಯೂ, ಹೀಟ್‌ಸ್ಟ್ರೋಕ್ ಭೀತಿಗೆ ಆರೋಗ್ಯ ಇಲಾಖೆ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ ಹವಾಮಾನ…

60 minutes ago

ಉಡುಪಿ: ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಬಳಸಿ ನ್ಯಾಯಾಲಯಕ್ಕೆ ವಂಚಿಸಲು ಯತ್ನ: ಇಬ್ಬರ ಬಂಧನ – vishwanews24

ಉಡುಪಿ: ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಬಳಸಿ ನ್ಯಾಯಾಲಯಕ್ಕೆ ವಂಚಿಸಲು ಯತ್ನ: ಇಬ್ಬರ ಬಂಧನ ಉಡುಪಿ: ಕ್ರಿಮಿನಲ್ ಪ್ರಕರಣವೊಂದರಲ್ಲಿ…

1 hour ago

ವಿದ್ಯುತ್ ತಂತಿ ತಗುಲಿ ಗಣೇಶ ಮೂರ್ತಿ ಉರುಳಿ ಬಿದ್ದು ಯುವಕ ಸಾವು – vishwanews24

ವಿದ್ಯುತ್ ತಂತಿ ತಗುಲಿ ಗಣೇಶ ಮೂರ್ತಿ ಉರುಳಿ ಬಿದ್ದು ಯುವಕ ಸಾವು ರಾಯಚೂರು: ಜಿಲ್ಲೆಯ ಸಿರವಾರ  ತಾಲೂಕಿನ ಅತ್ತನೂರು ಗ್ರಾಮದಲ್ಲಿ…

1 hour ago