ಬೆಂಗಳೂರು: ಯಶಸ್ವಿನಿ ಆರೋಗ್ಯ ರಕ್ಷಾ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದೇ ವೇಳೆ ದಿನಾಂಕವನ್ನು ವಿಸ್ತರಣೆ ಮಾಡಿ ಆದೇಶವನ್ನು ಹೊರಡಿಸಿದೆ.
ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ಮಾರ್ಚ್.31ರವರೆಗೆ ವಿಸ್ತರಿಸಲಾಗಿದೆ.
ಹಲವು ಸಹಕಾರಿಗಳು, ಶಾಸಕರು, ವಿಧಾನಪರಿಷತ್ ಸದಸ್ಯರ ಕೋರಿಕೆ ಮೇರೆಗೆ ರಾಜ್ಯ ಸರ್ಕಾರ ಈ ಹಿಂದೆ ಫೆ.28 ರವರೆಗೆ ಹೊಸ ಸದಸ್ಯರನ್ನು ನೋಂದಾಯಿಸುವ ಅವಕಾಶ ವಿಸ್ತರಿಸಿತ್ತು. ಈ ಬಳಿಕ ಇಂದು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಸಹಕಾರ ಇಲಾಖೆ, ಆದೇಶದಲ್ಲಿ ತಿಳಿಸಿದೆ. ಪ್ರಸಕ್ತ ಸಾಲಿಗೆ, 30 ಲಕ್ಷ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ. ಹೀಗಾಗಿ ಈ ಅವಧಿಯನ್ನು, ಒಂದು ತಿಂಗಳು ವಿಸ್ತರಿಸಿರುವುದಾಗಿ ಇಲಾಖೆ ಹೇಳಿದೆ.
ಅಂದ ಹಾಗೇ ಈ ಯೋಜನೆ ಅಡಿಯಲ್ಲಿ, ಈ ಯೋಜನೆಯಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು. ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ 300 ಕೋಟಿ ರೂ. ಅನುದಾನ ನಿಗದಿ ಪಡಿಸಿದೆ.
ಗ್ರಾಮೀಣ ಸಹಕಾರ ಸಂಘಗಳ, ಸ್ವ-ಸಹಾಯ ಗುಂಪುಗಳ ಗರಿಷ್ಟ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ.500/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.100/-ಗಳನ್ನು ಪಾವತಿಸಬೇಕು. ನಗರ ಸಹಕಾರ ಸಂಘಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ರೂ.1,000/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.200/- ಗಳನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಸಹಾಯಧನ ನೀಡುವ ಮೂಲಕ ಅವರ ವಾರ್ಷಿಕ ಸದಸ್ಯತ್ವದ ವಂತಿಗೆಯನ್ನು ಸರ್ಕಾರವೇ ಭರಿಸುತ್ತದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…