ಬೆಂಗಳೂರು: ಯಶಸ್ವಿನಿ ಆರೋಗ್ಯ ರಕ್ಷಾ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದೇ ವೇಳೆ ದಿನಾಂಕವನ್ನು ವಿಸ್ತರಣೆ ಮಾಡಿ ಆದೇಶವನ್ನು ಹೊರಡಿಸಿದೆ.
ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ಮಾರ್ಚ್.31ರವರೆಗೆ ವಿಸ್ತರಿಸಲಾಗಿದೆ.
ಹಲವು ಸಹಕಾರಿಗಳು, ಶಾಸಕರು, ವಿಧಾನಪರಿಷತ್ ಸದಸ್ಯರ ಕೋರಿಕೆ ಮೇರೆಗೆ ರಾಜ್ಯ ಸರ್ಕಾರ ಈ ಹಿಂದೆ ಫೆ.28 ರವರೆಗೆ ಹೊಸ ಸದಸ್ಯರನ್ನು ನೋಂದಾಯಿಸುವ ಅವಕಾಶ ವಿಸ್ತರಿಸಿತ್ತು. ಈ ಬಳಿಕ ಇಂದು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಸಹಕಾರ ಇಲಾಖೆ, ಆದೇಶದಲ್ಲಿ ತಿಳಿಸಿದೆ. ಪ್ರಸಕ್ತ ಸಾಲಿಗೆ, 30 ಲಕ್ಷ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ. ಹೀಗಾಗಿ ಈ ಅವಧಿಯನ್ನು, ಒಂದು ತಿಂಗಳು ವಿಸ್ತರಿಸಿರುವುದಾಗಿ ಇಲಾಖೆ ಹೇಳಿದೆ.
ಅಂದ ಹಾಗೇ ಈ ಯೋಜನೆ ಅಡಿಯಲ್ಲಿ, ಈ ಯೋಜನೆಯಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು. ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ 300 ಕೋಟಿ ರೂ. ಅನುದಾನ ನಿಗದಿ ಪಡಿಸಿದೆ.
ಗ್ರಾಮೀಣ ಸಹಕಾರ ಸಂಘಗಳ, ಸ್ವ-ಸಹಾಯ ಗುಂಪುಗಳ ಗರಿಷ್ಟ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ.500/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.100/-ಗಳನ್ನು ಪಾವತಿಸಬೇಕು. ನಗರ ಸಹಕಾರ ಸಂಘಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ರೂ.1,000/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.200/- ಗಳನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಸಹಾಯಧನ ನೀಡುವ ಮೂಲಕ ಅವರ ವಾರ್ಷಿಕ ಸದಸ್ಯತ್ವದ ವಂತಿಗೆಯನ್ನು ಸರ್ಕಾರವೇ ಭರಿಸುತ್ತದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…