ಸುರಪುರ : ಬಸ್ ಮತ್ತು ಕಾರಿನ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ6 ಮಂದಿ ಸಜೀವ ದಹನವಾಗಿರುವ ಘಟನೆ ತಾಲೂಕಿನ ತಿಂಥಣಿ ಸೇತುವೆ ಬಳಿಯ ಶಾಂತಪುರ ಕ್ರಾಸ್ ಹತ್ತಿರ ಬೀದರ್ ಬೆಂಗಳೂರು ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಲಿಂಗಸುಗೂರಿನಿಂದ ಕಲಬುರ್ಗಿ ಕಡೆಗೆ ಹೊರಟಿದ್ದ ಖಾಸಗಿ ಬಸ್ ಹಾಗೂ ಲಿಂಗಸುಗೂರು ಕಡೆಗೆ ಬರುತ್ತಿದ್ದ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಢಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಕಾರು ಮತ್ತು ಬಸ್ ಸಂಪೂರ್ಣ ಸುಟ್ಟು ಕರಕಲಾಗಿವೆ.
ಇದನ್ನೂ ಓದಿ :
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಸುಟ್ಟು ಕರಕಲಾಗಿದ್ದು, ಸ್ಥಳದಲ್ಲಿರುವವರು ನೀಡಿರುವ ಮಾಹಿತಿ ಪ್ರಕಾರ ಆರು ಜನ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಆದರೆ ಸುಟ್ಟ ಅವಶೇಷಗಳ ಮಧ್ಯೆ ನಾಲ್ಕು ಜನರ ತಲೆ ಬುರುಡೆಗಳು ಪತ್ತೆಯಾಗಿದ್ದು ಇನ್ನೂ ಇಬ್ಬರ ಮೃತ ದೇಹಗಳ ಹುಡುಕಾಟ ನಡೆಯುತ್ತಿದೆ. ಕಾರಿನಲ್ಲಿ ಆರು ಜನ ಪ್ರಯಾಣಿಸುತ್ತಿದ್ದರಾ ಅಥವಾ ನಾಲ್ಕೇ ಜನರು ಮಾತ್ರ ಇದ್ದರಾ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
ಖಾಸಗಿ ಬಸ್ಸಿನಲ್ಲಿದ್ದ ಯಾರಿಗೂ ಕೂಡ ಯಾವುದೇ ರೀತಿಯ ಜೀವ ಹಾನಿ ಸಂಭವಿಸಿಲ್ಲ. ಆದರೆ ಕಾರಿನಲ್ಲಿರುವ ಎಲ್ಲರೂ ಸಂಪೂರ್ಣ ಸುಟ್ಟು ಕರಕಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ :
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸುರಪುರ ಠಾಣೆಯ ಪಿ.ಐ ಉಮೇಶ ಎಂ ಸೇರಿದಂತೆ ಸಿಬ್ಬಂದಿಗಳು ಕೂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…