ಸುರಪುರ : ಬಸ್ ಮತ್ತು ಕಾರಿನ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ6 ಮಂದಿ ಸಜೀವ ದಹನವಾಗಿರುವ ಘಟನೆ ತಾಲೂಕಿನ ತಿಂಥಣಿ ಸೇತುವೆ ಬಳಿಯ ಶಾಂತಪುರ ಕ್ರಾಸ್ ಹತ್ತಿರ ಬೀದರ್ ಬೆಂಗಳೂರು ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಲಿಂಗಸುಗೂರಿನಿಂದ ಕಲಬುರ್ಗಿ ಕಡೆಗೆ ಹೊರಟಿದ್ದ ಖಾಸಗಿ ಬಸ್ ಹಾಗೂ ಲಿಂಗಸುಗೂರು ಕಡೆಗೆ ಬರುತ್ತಿದ್ದ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಢಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಕಾರು ಮತ್ತು ಬಸ್ ಸಂಪೂರ್ಣ ಸುಟ್ಟು ಕರಕಲಾಗಿವೆ.
ಇದನ್ನೂ ಓದಿ :
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಸುಟ್ಟು ಕರಕಲಾಗಿದ್ದು, ಸ್ಥಳದಲ್ಲಿರುವವರು ನೀಡಿರುವ ಮಾಹಿತಿ ಪ್ರಕಾರ ಆರು ಜನ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಆದರೆ ಸುಟ್ಟ ಅವಶೇಷಗಳ ಮಧ್ಯೆ ನಾಲ್ಕು ಜನರ ತಲೆ ಬುರುಡೆಗಳು ಪತ್ತೆಯಾಗಿದ್ದು ಇನ್ನೂ ಇಬ್ಬರ ಮೃತ ದೇಹಗಳ ಹುಡುಕಾಟ ನಡೆಯುತ್ತಿದೆ. ಕಾರಿನಲ್ಲಿ ಆರು ಜನ ಪ್ರಯಾಣಿಸುತ್ತಿದ್ದರಾ ಅಥವಾ ನಾಲ್ಕೇ ಜನರು ಮಾತ್ರ ಇದ್ದರಾ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
ಖಾಸಗಿ ಬಸ್ಸಿನಲ್ಲಿದ್ದ ಯಾರಿಗೂ ಕೂಡ ಯಾವುದೇ ರೀತಿಯ ಜೀವ ಹಾನಿ ಸಂಭವಿಸಿಲ್ಲ. ಆದರೆ ಕಾರಿನಲ್ಲಿರುವ ಎಲ್ಲರೂ ಸಂಪೂರ್ಣ ಸುಟ್ಟು ಕರಕಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ :
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸುರಪುರ ಠಾಣೆಯ ಪಿ.ಐ ಉಮೇಶ ಎಂ ಸೇರಿದಂತೆ ಸಿಬ್ಬಂದಿಗಳು ಕೂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…