Featured

ಯಾದಗಿರಿ : ವಸತಿ ನಿಲಯದ ಉಪಾಹಾರದ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಪತ್ತೆ ; ವಿದ್ಯಾರ್ಥಿಗಳು ಅಸ್ವಸ್ಥ  – Vishwanews24

ಯಾದಗಿರಿ : ವಸತಿ ನಿಲಯದ ಉಪಾಹಾರದ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಪತ್ತೆ ; ವಿದ್ಯಾರ್ಥಿಗಳು ಅಸ್ವಸ್ಥ  – Vishwanews24

ಯಾದಗಿರಿ : ಉಪಹಾರದಲ್ಲಿ ಹಾವು ಪತ್ತೆಯಾಗಿದ್ದು ಇದೇ ಉಪಹಾರ ಸೇವಿಸಿ 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆ ಸೇರಿರುವ ಘಟನೆ ಯಾದಗಿರಿ ತಾಲೂಕಿನ ಅಬ್ಬೆತುಮಕೂರನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದಿದೆ.

ಇಂದು ಬೆಳಿಗ್ಗೆ ಉಪಹಾರವಾಗಿ ವಿದ್ಯಾರ್ಥಿಗಳು ಉಪ್ಪಿಟ್ಟು ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಇನ್ನು ಉಪಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿದೆ. ಇತ್ತ ಹಾವಿನ ಮರಿ ಪತ್ತೆಯಾದ ನಂತರ ವಿದ್ಯಾರ್ಥಿಗಳು ಇನ್ನು ಹೆಚ್ಚು ಆತಂಕಗೊಂಡಿದ್ದಾರೆ.

ಸದ್ಯ ಅಸ್ವಸ್ಥಗೊಂಡ 52 ವಿದ್ಯಾರ್ಥಿಗಳಿಗೆ ಮುದ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಹೆಚ್ಚಿನ ಚಿಕಿತ್ಸೆ ಪಡೆಯಲು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಸ್ಪತ್ರೆಗೆ ಟಿಹೆಚ್ಓ ಹಣಮಂತರೆಡ್ಡಿ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ ವಿದ್ಯಾರ್ಥಿಗಳಿಗೆ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹಣಮಂತರೆಡ್ಡಿ ಮಾಹಿತಿ ನೀಡಿದ್ದಾರೆ.

ಶಾಸಕರ ಭೇಟಿ: ಸ್ಥಳೀಯ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ವಿಷಯ ತಿಳಿಯುತ್ತಲೇ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ನಂತರ ವೈದ್ಯರಿಂದ ಮಾಹಿತಿ ಪಡೆದ ಅವರು, ಸದ್ಯಕ್ಕೆ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿಲ್ಲ.‌ ಬಹುಶಃ ಉಪ್ಪಿಟ್ಟು ನಲ್ಲಿ ಪತ್ತೆಯಾಗಿರುವ ಹಾವಿನ ಮರಿ ಸತ್ತದ್ದಾಗಿದೆ.‌ ಉಪಾಹಾರ ತಯಾರಿಸುವ ವೇಳೆ ಸ್ವಚ್ಛತೆ ಕಾಪಾಡ ಕಾರಣ ಇದು ಸಂಭವಿಸಿರುವ ಸಾಧ್ಯತೆ ಇದೆ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

‘ಮುಂದೆಯೂ ವಸತಿ ಶಾಲೆಗಳಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆ ಪರಿಶೀಲನೆ ಮಾಡಲಾಗುವುದು. ಈಗಾಗಲೇ ಹಲವು ವಸತಿನಿಲಯಗಳಿಗೆ ಭೇಟಿ ನೀಡಲಾಗಿದೆ’ ಎಂದರು.

ಇದಕ್ಕೂ ಮೊದಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಜೀವಕುಮಾರ ರಾಯಚೂರಕರ್ ಮಾತನಾಡಿ, ‘ಉಪಾಹಾರ ಸೇವಿಸಿದ ವಿದ್ಯಾರ್ಥಿಗಳ ಆರೋಗ್ಯ ಮೇಲೆ ನಿಗಾ ಇರಿಸಲಾಗಿದೆ. ಯಾರಿಗೂ ಜೀವಕ್ಕೆ ಅಪಾಯವಿಲ್ಲ. ಮಕ್ಕಳ ನಿಗಾ ಘಟಕದಲ್ಲಿ ಆರೈಕೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

2 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

2 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

4 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

5 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

6 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

6 hours ago