Featured

ಯಾದಗಿರಿ : ವಸತಿ ನಿಲಯದ ಉಪಾಹಾರದ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಪತ್ತೆ ; ವಿದ್ಯಾರ್ಥಿಗಳು ಅಸ್ವಸ್ಥ  – Vishwanews24

ಯಾದಗಿರಿ : ವಸತಿ ನಿಲಯದ ಉಪಾಹಾರದ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಪತ್ತೆ ; ವಿದ್ಯಾರ್ಥಿಗಳು ಅಸ್ವಸ್ಥ  – Vishwanews24

ಯಾದಗಿರಿ : ಉಪಹಾರದಲ್ಲಿ ಹಾವು ಪತ್ತೆಯಾಗಿದ್ದು ಇದೇ ಉಪಹಾರ ಸೇವಿಸಿ 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆ ಸೇರಿರುವ ಘಟನೆ ಯಾದಗಿರಿ ತಾಲೂಕಿನ ಅಬ್ಬೆತುಮಕೂರನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದಿದೆ.

ಇಂದು ಬೆಳಿಗ್ಗೆ ಉಪಹಾರವಾಗಿ ವಿದ್ಯಾರ್ಥಿಗಳು ಉಪ್ಪಿಟ್ಟು ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಇನ್ನು ಉಪಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿದೆ. ಇತ್ತ ಹಾವಿನ ಮರಿ ಪತ್ತೆಯಾದ ನಂತರ ವಿದ್ಯಾರ್ಥಿಗಳು ಇನ್ನು ಹೆಚ್ಚು ಆತಂಕಗೊಂಡಿದ್ದಾರೆ.

ಸದ್ಯ ಅಸ್ವಸ್ಥಗೊಂಡ 52 ವಿದ್ಯಾರ್ಥಿಗಳಿಗೆ ಮುದ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಹೆಚ್ಚಿನ ಚಿಕಿತ್ಸೆ ಪಡೆಯಲು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಸ್ಪತ್ರೆಗೆ ಟಿಹೆಚ್ಓ ಹಣಮಂತರೆಡ್ಡಿ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ ವಿದ್ಯಾರ್ಥಿಗಳಿಗೆ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹಣಮಂತರೆಡ್ಡಿ ಮಾಹಿತಿ ನೀಡಿದ್ದಾರೆ.

ಶಾಸಕರ ಭೇಟಿ: ಸ್ಥಳೀಯ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ವಿಷಯ ತಿಳಿಯುತ್ತಲೇ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ನಂತರ ವೈದ್ಯರಿಂದ ಮಾಹಿತಿ ಪಡೆದ ಅವರು, ಸದ್ಯಕ್ಕೆ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿಲ್ಲ.‌ ಬಹುಶಃ ಉಪ್ಪಿಟ್ಟು ನಲ್ಲಿ ಪತ್ತೆಯಾಗಿರುವ ಹಾವಿನ ಮರಿ ಸತ್ತದ್ದಾಗಿದೆ.‌ ಉಪಾಹಾರ ತಯಾರಿಸುವ ವೇಳೆ ಸ್ವಚ್ಛತೆ ಕಾಪಾಡ ಕಾರಣ ಇದು ಸಂಭವಿಸಿರುವ ಸಾಧ್ಯತೆ ಇದೆ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

‘ಮುಂದೆಯೂ ವಸತಿ ಶಾಲೆಗಳಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆ ಪರಿಶೀಲನೆ ಮಾಡಲಾಗುವುದು. ಈಗಾಗಲೇ ಹಲವು ವಸತಿನಿಲಯಗಳಿಗೆ ಭೇಟಿ ನೀಡಲಾಗಿದೆ’ ಎಂದರು.

ಇದಕ್ಕೂ ಮೊದಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಜೀವಕುಮಾರ ರಾಯಚೂರಕರ್ ಮಾತನಾಡಿ, ‘ಉಪಾಹಾರ ಸೇವಿಸಿದ ವಿದ್ಯಾರ್ಥಿಗಳ ಆರೋಗ್ಯ ಮೇಲೆ ನಿಗಾ ಇರಿಸಲಾಗಿದೆ. ಯಾರಿಗೂ ಜೀವಕ್ಕೆ ಅಪಾಯವಿಲ್ಲ. ಮಕ್ಕಳ ನಿಗಾ ಘಟಕದಲ್ಲಿ ಆರೈಕೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

18 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

18 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

18 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

19 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

20 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

20 hours ago