Featured

ಯಾದಗಿರಿ : ವಸತಿ ನಿಲಯದ ಉಪಾಹಾರದ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಪತ್ತೆ ; ವಿದ್ಯಾರ್ಥಿಗಳು ಅಸ್ವಸ್ಥ  – Vishwanews24

ಯಾದಗಿರಿ : ವಸತಿ ನಿಲಯದ ಉಪಾಹಾರದ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಪತ್ತೆ ; ವಿದ್ಯಾರ್ಥಿಗಳು ಅಸ್ವಸ್ಥ  – Vishwanews24

ಯಾದಗಿರಿ : ಉಪಹಾರದಲ್ಲಿ ಹಾವು ಪತ್ತೆಯಾಗಿದ್ದು ಇದೇ ಉಪಹಾರ ಸೇವಿಸಿ 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆ ಸೇರಿರುವ ಘಟನೆ ಯಾದಗಿರಿ ತಾಲೂಕಿನ ಅಬ್ಬೆತುಮಕೂರನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದಿದೆ.

ಇಂದು ಬೆಳಿಗ್ಗೆ ಉಪಹಾರವಾಗಿ ವಿದ್ಯಾರ್ಥಿಗಳು ಉಪ್ಪಿಟ್ಟು ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಇನ್ನು ಉಪಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿದೆ. ಇತ್ತ ಹಾವಿನ ಮರಿ ಪತ್ತೆಯಾದ ನಂತರ ವಿದ್ಯಾರ್ಥಿಗಳು ಇನ್ನು ಹೆಚ್ಚು ಆತಂಕಗೊಂಡಿದ್ದಾರೆ.

ಸದ್ಯ ಅಸ್ವಸ್ಥಗೊಂಡ 52 ವಿದ್ಯಾರ್ಥಿಗಳಿಗೆ ಮುದ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಹೆಚ್ಚಿನ ಚಿಕಿತ್ಸೆ ಪಡೆಯಲು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಸ್ಪತ್ರೆಗೆ ಟಿಹೆಚ್ಓ ಹಣಮಂತರೆಡ್ಡಿ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ ವಿದ್ಯಾರ್ಥಿಗಳಿಗೆ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹಣಮಂತರೆಡ್ಡಿ ಮಾಹಿತಿ ನೀಡಿದ್ದಾರೆ.

ಶಾಸಕರ ಭೇಟಿ: ಸ್ಥಳೀಯ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ವಿಷಯ ತಿಳಿಯುತ್ತಲೇ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ನಂತರ ವೈದ್ಯರಿಂದ ಮಾಹಿತಿ ಪಡೆದ ಅವರು, ಸದ್ಯಕ್ಕೆ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿಲ್ಲ.‌ ಬಹುಶಃ ಉಪ್ಪಿಟ್ಟು ನಲ್ಲಿ ಪತ್ತೆಯಾಗಿರುವ ಹಾವಿನ ಮರಿ ಸತ್ತದ್ದಾಗಿದೆ.‌ ಉಪಾಹಾರ ತಯಾರಿಸುವ ವೇಳೆ ಸ್ವಚ್ಛತೆ ಕಾಪಾಡ ಕಾರಣ ಇದು ಸಂಭವಿಸಿರುವ ಸಾಧ್ಯತೆ ಇದೆ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

‘ಮುಂದೆಯೂ ವಸತಿ ಶಾಲೆಗಳಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆ ಪರಿಶೀಲನೆ ಮಾಡಲಾಗುವುದು. ಈಗಾಗಲೇ ಹಲವು ವಸತಿನಿಲಯಗಳಿಗೆ ಭೇಟಿ ನೀಡಲಾಗಿದೆ’ ಎಂದರು.

ಇದಕ್ಕೂ ಮೊದಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಜೀವಕುಮಾರ ರಾಯಚೂರಕರ್ ಮಾತನಾಡಿ, ‘ಉಪಾಹಾರ ಸೇವಿಸಿದ ವಿದ್ಯಾರ್ಥಿಗಳ ಆರೋಗ್ಯ ಮೇಲೆ ನಿಗಾ ಇರಿಸಲಾಗಿದೆ. ಯಾರಿಗೂ ಜೀವಕ್ಕೆ ಅಪಾಯವಿಲ್ಲ. ಮಕ್ಕಳ ನಿಗಾ ಘಟಕದಲ್ಲಿ ಆರೈಕೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

Vishwa News 24

Recent Posts

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

5 hours ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

5 hours ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

5 hours ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

5 hours ago

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು – vishwanews24

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…

7 hours ago

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ – vishwanews24

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ…

7 hours ago