Featured

ಯಾರಾಗಲಿದ್ದಾರೆ ಕಾಂಗ್ರೆಸ್ ನೂತನ ಸಾರಥಿ? Vishwanews24

ಯಾರಾಗಲಿದ್ದಾರೆ ಕಾಂಗ್ರೆಸ್ ನೂತನ ಸಾರಥಿ? Vishwanews24

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಅಧ್ಯಕ್ಷ ಗಾದಿಯಲ್ಲಿ ಯಾರನ್ನು ಕೂರಿಸುವುದು ಎನ್ನುವ ಬಗ್ಗೆ ತೀವ್ರ ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಮಧ್ಯಂತರ ಅಧ್ಯಕ್ಷೆ ಆಗಿರುವ ಸೋನಿಯಾ ಗಾಂಧಿ ಅವರ ಅವಧಿ ಈಗಾಗಲೇ ಮುಕ್ತಾಯಗೊಂಡಿದೆ. ಇಂದು ನವದೆಹಲಿಯಲ್ಲಿ, ಪಕ್ಷದ ಅತ್ಯುನ್ನತ ನೀತಿ ನಿರ್ಧಾರ ಮಂಡಳಿಯಾಗಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ.

ಕೋವಿಡ್ 19 ಹಿನ್ನೆಲೆಯಲ್ಲಿ ಆನ್​​ಲೈನ್ ಮೂಲಕ ವರ್ಚುವಲ್ ಸಭೆ ನಡೆಯುತ್ತಿದೆ. ಸಭೆಯಲ್ಲಿ ಸೋನಿಯಾ ಗಾಂಧಿಯವರೇ ಎಐಸಿಸಿ ಅಧ್ಯಕ್ಷರಾಗಿ ಮುಂದುವರಿಯಬೇಕೆಂದು ಸದಸ್ಯರಿಂದ ಒತ್ತಾಯ ಕೇಳಿಬರುವ ಸಾಧ್ಯತೆ ಇದೆ. ಹಾಗೇ ಸೋನಿಯಾ ಗಾಂಧಿ ಅಧ್ಯಕ್ಷ ಸ್ಥಾನ ಹಸ್ತಾಂತರಕ್ಕೆ ಮನಸ್ಸು ಮಾಡಿದರೆ ರಾಹುಲ್ ಗಾಂಧಿ ಅಧ್ಯಕ್ಷರಾಗಲಿ ಎಂಬ ಅಭಿಪ್ರಾಯ ವ್ಯಕ್ತವಾಗಲಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಇಬ್ಬರೂ ಅಚಲ ನಿರ್ಧಾರ ಮಾಡಿ‌ ಅಧ್ಯಕ್ಷ ಸ್ಥಾನ ನಿರಾಕರಿಸಿದರಷ್ಟೇ ಪರ್ಯಾಯ ಹೆಸರು ಪರಿಗಣಿಸಲಾಗುತ್ತದೆ ಎನ್ನಲಾಗ್ತಿದೆ.

ಕಾಂಗ್ರೆಸ್ ಪಕ್ಷಕ್ಕೆ ಗಾಂಧಿ ಕುಟುಂಬಯೇತರು ಅಧ್ಯಕ್ಷರಾಗಬೇಕು ಎಂದು ಪ್ರಿಯಾಂಕ ಗಾಂಧಿ ಅವರು ಹೇಳಿದ್ದು, ಆ ಮೂಲಕ ಕಾಂಗ್ರೆಸ್ ನಾಯಕರ ಮಧ್ಯೆ ಅಧ್ಯಕ್ಷರು ಯಾರಾಗಬೇಕು ಎಂಬುದರ ಬಗ್ಗೆ ಗೊಂದಲ ಹೆಚ್ಚಿದೆ. ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್, ತಿರುವನಂತಪುರದದ ಸಂಸದ ಶಶಿ ತರೂರ್ ಪರ ಪ್ರಿಯಾಂಕಾ ಗಾಂಧಿ ಒಲವು ವ್ಯಕ್ತಪಡಿಸಿದ್ದರೆ. ಇತ್ತ ಮಲ್ಲಕಾರ್ಜುನ ಖರ್ಜೆ ಕೂಡ ಈ ಸಾಲಿನಲ್ಲಿ ಗುರುತಿಸಿಕೊಂಡಿದ್ದಾರೆ. ಆದರೆ ಮನೀಶ್ ತಿವಾರಿ ಸೇರಿದಂತೆ ಕೆಲ ನಾಯಕರು ಪಕ್ಷದ ಒಳಗಡೆ ಒಂದು ಚುನಾವಣೆ ನಡೆಸಿ ಆಯ್ಕೆ ಮಾಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago