ಬೆಂಗಳೂರು: ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ನಾನೇನೂ ತಪ್ಪು ಮಾಡಿಲ್ಲ, ರೇಪು ಮಾಡಿಲ್ಲ, ದುಡ್ಡು ಕದ್ದಿಲ್ಲ. ರಾಜಕೀಯವಾಗಿ ನಮ್ಮ ಪಕ್ಷದ ಶಾಸಕರನ್ನು ರಕ್ಷಣೆ ಮಾಡಲು ಅವರನ್ನು ಹಿಡಿದಿಟ್ಟಿದ್ವಿ. ಹೀಗಾಗಿ ಅದಕ್ಕಾಗಿ ಈಗ ಬೇಕಾದಷ್ಟು ಅನುಭವಿಸುತ್ತಿದ್ದೇವೆ. ಪರವಾಗಿಲ್ಲ ಎಲ್ಲವನ್ನೂ ನಾವು ಫೇಸ್ ಮಾಡಬೇಕು ಎಂದರು.
ಏನಾದರೂ, ಯಾರಿಗಾದರೂ ಒಳ್ಳೆಯದು ಮಾಡಲು ಹೊರಟಾಗ ಈ ರೀತಿ ಆಗುತ್ತದೆ. ಗುರುವಾರ ನಾವು ಹಾಕಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.
ಗುರುವಾರ ರಾತ್ರಿ 9.40ಕ್ಕೆ ನನಗೆ ಸಮನ್ಸ್ ಕೊಟ್ಟು ಒಂದು ಗಂಟೆಗೆ ಬರಬೇಕು ಎಂದು ನೋಟಿಸ್ ನೀಡಿದ್ದಾರೆ. ಅದಕ್ಕೂ ಮೊದಲು ಪ್ರೆಸ್ ಮೀಟ್ ಮಾಡಿ ಮಾತಾಡೇ ದೆಹಲಿಗೆ ಹೋಗುತ್ತೇನೆ. ನನಗೆ ಒಂದೆರಡು ಗಂಟೆ ಪರ್ಸನಲ್ ಕಮಿಟ್ ಮೆಂಟ್ ಕೆಲಸ ಇದೆ. ಆದ್ದರಿಂದ ಹೋಗುತ್ತಿದ್ದೇನೆ. ನನ್ನ ಯಾರೂ ಫಾಲೋ ಮಾಡಬೇಡಿ ಎಂದು ಡಿಕೆಶಿ ಮನವಿ ಮಾಡಿಕೊಂಡರು.
ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಆತಿಥ್ಯ ನೀಡಿದ್ದ ಹಿನ್ನೆಲೆಯಲ್ಲಿ ನನ್ನ ಮೇಲೆ ಆದಾಯ ತೆರಿಗೆ ಇಲಾಖೆಯಿಂದ ದಾಳಿ ಮಾಡಿಸಲಾಗಿತ್ತು.ಕಾಂಗ್ರೆಸ್ಸಿನ ನಿಷ್ಠಾವಂತ ಸೈನಿಕ ಮತ್ತು ಜವಾಬ್ದಾರಿಯುತ ರಾಜಕಾರಣಿಯಾಗಿ, ನನ್ನ ಪಕ್ಷ ನಿರ್ದೇಶಿಸಿದಂತೆ ಮಾಡಿದ್ದೇನೆ. ಅದಕ್ಕಾಗಿ ನನ್ನನ್ನು ಗುರಿಯಾಗಿಸಲಾಗುತ್ತಿದೆ. ಕಾನೂನು ವ್ಯವಸ್ಥೆಗಳಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಮತ್ತು ಅದನ್ನು ನಾನು ಕಾನೂನುಬದ್ಧವಾಗಿ ಮತ್ತು ರಾಜಕೀಯವಾಗಿ ಎದುರಿಸುತ್ತೇನೆ ಎಂದವರು ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…