ಬೆಂಗಳೂರು: ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ನಾನೇನೂ ತಪ್ಪು ಮಾಡಿಲ್ಲ, ರೇಪು ಮಾಡಿಲ್ಲ, ದುಡ್ಡು ಕದ್ದಿಲ್ಲ. ರಾಜಕೀಯವಾಗಿ ನಮ್ಮ ಪಕ್ಷದ ಶಾಸಕರನ್ನು ರಕ್ಷಣೆ ಮಾಡಲು ಅವರನ್ನು ಹಿಡಿದಿಟ್ಟಿದ್ವಿ. ಹೀಗಾಗಿ ಅದಕ್ಕಾಗಿ ಈಗ ಬೇಕಾದಷ್ಟು ಅನುಭವಿಸುತ್ತಿದ್ದೇವೆ. ಪರವಾಗಿಲ್ಲ ಎಲ್ಲವನ್ನೂ ನಾವು ಫೇಸ್ ಮಾಡಬೇಕು ಎಂದರು.
ಏನಾದರೂ, ಯಾರಿಗಾದರೂ ಒಳ್ಳೆಯದು ಮಾಡಲು ಹೊರಟಾಗ ಈ ರೀತಿ ಆಗುತ್ತದೆ. ಗುರುವಾರ ನಾವು ಹಾಕಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.
ಗುರುವಾರ ರಾತ್ರಿ 9.40ಕ್ಕೆ ನನಗೆ ಸಮನ್ಸ್ ಕೊಟ್ಟು ಒಂದು ಗಂಟೆಗೆ ಬರಬೇಕು ಎಂದು ನೋಟಿಸ್ ನೀಡಿದ್ದಾರೆ. ಅದಕ್ಕೂ ಮೊದಲು ಪ್ರೆಸ್ ಮೀಟ್ ಮಾಡಿ ಮಾತಾಡೇ ದೆಹಲಿಗೆ ಹೋಗುತ್ತೇನೆ. ನನಗೆ ಒಂದೆರಡು ಗಂಟೆ ಪರ್ಸನಲ್ ಕಮಿಟ್ ಮೆಂಟ್ ಕೆಲಸ ಇದೆ. ಆದ್ದರಿಂದ ಹೋಗುತ್ತಿದ್ದೇನೆ. ನನ್ನ ಯಾರೂ ಫಾಲೋ ಮಾಡಬೇಡಿ ಎಂದು ಡಿಕೆಶಿ ಮನವಿ ಮಾಡಿಕೊಂಡರು.
ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಆತಿಥ್ಯ ನೀಡಿದ್ದ ಹಿನ್ನೆಲೆಯಲ್ಲಿ ನನ್ನ ಮೇಲೆ ಆದಾಯ ತೆರಿಗೆ ಇಲಾಖೆಯಿಂದ ದಾಳಿ ಮಾಡಿಸಲಾಗಿತ್ತು.ಕಾಂಗ್ರೆಸ್ಸಿನ ನಿಷ್ಠಾವಂತ ಸೈನಿಕ ಮತ್ತು ಜವಾಬ್ದಾರಿಯುತ ರಾಜಕಾರಣಿಯಾಗಿ, ನನ್ನ ಪಕ್ಷ ನಿರ್ದೇಶಿಸಿದಂತೆ ಮಾಡಿದ್ದೇನೆ. ಅದಕ್ಕಾಗಿ ನನ್ನನ್ನು ಗುರಿಯಾಗಿಸಲಾಗುತ್ತಿದೆ. ಕಾನೂನು ವ್ಯವಸ್ಥೆಗಳಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಮತ್ತು ಅದನ್ನು ನಾನು ಕಾನೂನುಬದ್ಧವಾಗಿ ಮತ್ತು ರಾಜಕೀಯವಾಗಿ ಎದುರಿಸುತ್ತೇನೆ ಎಂದವರು ಹೇಳಿದ್ದಾರೆ.
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಚಂಡೀಗಢ: ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ…
ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ…
ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ…
ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ ಮಂಗಳೂರು:ಬಂಟ್ವಾಳದ ಬಿ.ಸಿ. ರಸ್ತೆಯ ಕೆಎಸ್ಆರ್ಟಿಸಿ…
ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕುಮಟಾ ತಾಲೂಕಿನ…
ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ ಕಾರ್ಕಳ: ನಗರದ ಶಿವತಿಕೆರೆ ಸಮೀಪ ರವಿವಾರ…