Featured

ಯಾರು ಕಾಂಗ್ರೆಸ್‌ಗೆ ಮತ ಹಾಕುತ್ತಾರೋ ಅವರ ಮತಗಳನ್ನೇ ಕದಿಯಲಾಗಿದೆ : ಬಿ.ಕೆ. ಹರಿಪ್ರಸಾದ್ – vishwanews24

ಯಾರು ಕಾಂಗ್ರೆಸ್‌ಗೆ ಮತ ಹಾಕುತ್ತಾರೋ ಅವರ ಮತಗಳನ್ನೇ ಕದಿಯಲಾಗಿದೆ : ಬಿ.ಕೆ. ಹರಿಪ್ರಸಾದ್

ಮಂಗಳೂರು: ನಾನು ಹರಿಯಾಣ ಉಸ್ತುವಾರಿಯಲ್ಲಿದ್ದ 8 ಕ್ಷೇತ್ರಗಳಲ್ಲಿ 22 ಸಾವಿರ ಮತಗಳ ಕಳವಾಗಿದೆ. ಎಲ್ಲ ಮತಗಟ್ಟೆ ಸಮೀಕ್ಷೆ ನಮ್ಮ ಪರ ಇತ್ತು. ಹಾಗಿದ್ದರೂ ನಾವು ಸೋತಿರುವುದಕ್ಕೆ ವೋಟರ್ ದಂಧೆಯೇ ಕಾರಣ. ಯಾರು ಕಾಂಗ್ರೆಸ್‌ಗೆ ಅಚಲವಾಗಿ ಮತ ಹಾಕುತ್ತಾರೋ ಅವರ ಮತಗಳನ್ನೇ ಕದಿಯಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಪಾದಿಸಿದರು.

ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಬಿಜೆಪಿಯವರು ಓಟ್ ಚೋರಿಗೆ ಖರ್ಚು ಕಮ್ಮಿ ಎಂದು ಅದಕ್ಕೆ ಕೈ ಹಾಕಿದ್ದಾರೆ. ಇಷ್ಟು ದಿನ ಶಾಸಕರ ಕಳವು ನಡೆಯುತ್ತಿತ್ತು. ಬಿಜೆಪಿ ಈವರೆಗೂ ಚುನಾವಣೆಯನ್ನು ವಾಮಮಾರ್ಗದಲ್ಲಿಯೇ ಗೆದ್ದಿದೆ ಎಂದರು.

ಜನಗಣಮನ ರಾಷ್ಟ್ರಗೀತೆ ಅಲ್ಲ ಎಂಬ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ದೇಶದ್ರೋಹದ ಹೇಳಿಕೆಗೆ ಕೇಸು ದಾಖಲಿಸಬೇಕು. ಬಿಜೆಪಿಯವರು ರಾಷ್ಟ್ರಗೀತೆ ಹಾಗೂ ನೊಬೆಲ್ ಪುರಸ್ಕೃತ ರವೀಂದ್ರನಾಥ ಠಾಗೋರ್ ಅವರಿಗೆ ಅವಮಾನ ಮಾಡುತ್ತಿದ್ದಾರೆ. ಮಹಾತ್ಮಾ ಗಾಂಧಿ ಕೊಂದಾಯಿತು. ಈಗ ರಾಷ್ಟ್ರದ ಸಂಸ್ಕೃತಿ ಬಿಂಬಿಸಿದ ಠಾಗೋರ್ ಮೇಲೆ ದಾಳಿ ಮಾಡುತ್ತಿದ್ದಾರೆ. ಇದನ್ನು ನೋಡಿದಾಗ ಇವರು ದೇಶದ್ರೋಹಿಗಳು ಎನ್ನುವುದು ಸ್ಪಷ್ಟ ಎಂದರು.

ರಾಜ್ಯದಲ್ಲಿ ಆರೆಸ್ಸೆಸ್ ನಿಷೇಧ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, ಆರೆಸ್ಸೆಸ್ ಏನು ಅನ್ನುವುದು ಕೇರಳದಲ್ಲಿ ಗೊತ್ತಾಗಿದೆ. ಕಾಶ್ಮೀರದ ಕಟುವಾದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಆ ಪ್ರಕರಣದ ಆರೋಪಿಯ ಪರ ಬಿಜೆಪಿ ಸಚಿವರು ನಿಂತಿದ್ದರು. ಆರೆಸ್ಸೆಸ್‌ನಿಂದ ನಾವು ಕಲಿಯಬೇಕಾದದ್ದಿಲ್ಲ. 5 ಸಾವಿರ ವರ್ಷಗಳ ಇತಿಹಾಸದ ಸನಾತನ ಧರ್ಮಕ್ಕೆ ಆರೆಸ್ಸೆಸ್‌ನಿಂದ ಅಪಾಯವಿದೆ. ಈ ಹಿಂದೆ ತಾಲಿಬಾನ್ ವಿರೋಧಿಸಿದವರು ಈಗ ಅವರನ್ನೇ ಆಹ್ವಾನಿಸುತ್ತಿದ್ದು, 200 ಕೋಟಿ ರೂ. ಸಹಾಯಧನ ನೀಡುತ್ತಿದ್ದಾರೆ ಎಂದರು.

 

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago