Featured

ಯಾರು ಕಾಂಗ್ರೆಸ್‌ಗೆ ಮತ ಹಾಕುತ್ತಾರೋ ಅವರ ಮತಗಳನ್ನೇ ಕದಿಯಲಾಗಿದೆ : ಬಿ.ಕೆ. ಹರಿಪ್ರಸಾದ್ – vishwanews24

ಯಾರು ಕಾಂಗ್ರೆಸ್‌ಗೆ ಮತ ಹಾಕುತ್ತಾರೋ ಅವರ ಮತಗಳನ್ನೇ ಕದಿಯಲಾಗಿದೆ : ಬಿ.ಕೆ. ಹರಿಪ್ರಸಾದ್

ಮಂಗಳೂರು: ನಾನು ಹರಿಯಾಣ ಉಸ್ತುವಾರಿಯಲ್ಲಿದ್ದ 8 ಕ್ಷೇತ್ರಗಳಲ್ಲಿ 22 ಸಾವಿರ ಮತಗಳ ಕಳವಾಗಿದೆ. ಎಲ್ಲ ಮತಗಟ್ಟೆ ಸಮೀಕ್ಷೆ ನಮ್ಮ ಪರ ಇತ್ತು. ಹಾಗಿದ್ದರೂ ನಾವು ಸೋತಿರುವುದಕ್ಕೆ ವೋಟರ್ ದಂಧೆಯೇ ಕಾರಣ. ಯಾರು ಕಾಂಗ್ರೆಸ್‌ಗೆ ಅಚಲವಾಗಿ ಮತ ಹಾಕುತ್ತಾರೋ ಅವರ ಮತಗಳನ್ನೇ ಕದಿಯಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಪಾದಿಸಿದರು.

ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಬಿಜೆಪಿಯವರು ಓಟ್ ಚೋರಿಗೆ ಖರ್ಚು ಕಮ್ಮಿ ಎಂದು ಅದಕ್ಕೆ ಕೈ ಹಾಕಿದ್ದಾರೆ. ಇಷ್ಟು ದಿನ ಶಾಸಕರ ಕಳವು ನಡೆಯುತ್ತಿತ್ತು. ಬಿಜೆಪಿ ಈವರೆಗೂ ಚುನಾವಣೆಯನ್ನು ವಾಮಮಾರ್ಗದಲ್ಲಿಯೇ ಗೆದ್ದಿದೆ ಎಂದರು.

ಜನಗಣಮನ ರಾಷ್ಟ್ರಗೀತೆ ಅಲ್ಲ ಎಂಬ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ದೇಶದ್ರೋಹದ ಹೇಳಿಕೆಗೆ ಕೇಸು ದಾಖಲಿಸಬೇಕು. ಬಿಜೆಪಿಯವರು ರಾಷ್ಟ್ರಗೀತೆ ಹಾಗೂ ನೊಬೆಲ್ ಪುರಸ್ಕೃತ ರವೀಂದ್ರನಾಥ ಠಾಗೋರ್ ಅವರಿಗೆ ಅವಮಾನ ಮಾಡುತ್ತಿದ್ದಾರೆ. ಮಹಾತ್ಮಾ ಗಾಂಧಿ ಕೊಂದಾಯಿತು. ಈಗ ರಾಷ್ಟ್ರದ ಸಂಸ್ಕೃತಿ ಬಿಂಬಿಸಿದ ಠಾಗೋರ್ ಮೇಲೆ ದಾಳಿ ಮಾಡುತ್ತಿದ್ದಾರೆ. ಇದನ್ನು ನೋಡಿದಾಗ ಇವರು ದೇಶದ್ರೋಹಿಗಳು ಎನ್ನುವುದು ಸ್ಪಷ್ಟ ಎಂದರು.

ರಾಜ್ಯದಲ್ಲಿ ಆರೆಸ್ಸೆಸ್ ನಿಷೇಧ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, ಆರೆಸ್ಸೆಸ್ ಏನು ಅನ್ನುವುದು ಕೇರಳದಲ್ಲಿ ಗೊತ್ತಾಗಿದೆ. ಕಾಶ್ಮೀರದ ಕಟುವಾದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಆ ಪ್ರಕರಣದ ಆರೋಪಿಯ ಪರ ಬಿಜೆಪಿ ಸಚಿವರು ನಿಂತಿದ್ದರು. ಆರೆಸ್ಸೆಸ್‌ನಿಂದ ನಾವು ಕಲಿಯಬೇಕಾದದ್ದಿಲ್ಲ. 5 ಸಾವಿರ ವರ್ಷಗಳ ಇತಿಹಾಸದ ಸನಾತನ ಧರ್ಮಕ್ಕೆ ಆರೆಸ್ಸೆಸ್‌ನಿಂದ ಅಪಾಯವಿದೆ. ಈ ಹಿಂದೆ ತಾಲಿಬಾನ್ ವಿರೋಧಿಸಿದವರು ಈಗ ಅವರನ್ನೇ ಆಹ್ವಾನಿಸುತ್ತಿದ್ದು, 200 ಕೋಟಿ ರೂ. ಸಹಾಯಧನ ನೀಡುತ್ತಿದ್ದಾರೆ ಎಂದರು.

 

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

12 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

13 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

13 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

13 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

13 hours ago