ಬೆಂಗಳೂರು: ಯಾರು ವಾಮಮಾರ್ಗದಲ್ಲಿ ಗೆದ್ದಿರುತ್ತಾರೆ ಅವರೇ ನಶೆಹಾದರದ ದಾಸರು. ಉಪ್ಪುತಿಂದವ ನೀರು ಕುಡಿಯುವ ಎಂದು ಜಗ್ಗೇಶ್ ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಆಕ್ರೋಶದಿಂದ ಪ್ರತಿಕ್ರಿಯಿಸಿದ್ದಾರೆ.
ಸ್ಯಾಂಡಲ್ವುಡ್ನ ಕೆಲ ಕಲಾವಿದರಿಗೆ ಡ್ರಗ್ಸ್ ಪೂರೈಕೆ ವಿಚಾರವಾಗಿ ನಟ ಜಗ್ಗೇಶ್ ಅವರು ಆಕ್ರೋಶ ಭರಿತವಾಗಿ ಟ್ವೀಟ್ ಮಾಡುವ ಮೂಲಕ ಡ್ರಗ್ಸ್ ಮಾಫಿಯಾದ ಬಗ್ಗೆ ಮಾತನಾಡಿದರು.
ಸರಿಯಾಗಿ ಬಾಳಿಬದುಕುವ ನಿರ್ಧಾರ ಮಾಡಿ ಶ್ರಮಿಸುವರು ಎಲ್ಲೇ ಇದ್ದರು ಶ್ರೇಷ್ಠವಾಗಿ ಉಳಿಯುತ್ತಾರೆ. ನಾನು ನನ್ನಿಷ್ಟ, ನನ್ನ ಬದುಕು ಎನ್ನುವರ ಮಠಕ್ಕೆ ಸೇರಿಸಿದರೂ ನಶೆ, ಹಾದರದ ಬಿಸಿ ಹೆಂಚಿನ ಮೇಲೆ ಸ್ವಲ್ಪ ಕಾಲಬದುಕಿ ವಿಕೃತ ಆನಂದ ಅನುಭವಿಸಿ ಸೀದು ಹೋಗುತ್ತಾರೆ. ಏಕ್ ಮಾರ್ ದೋ ತುಕಡ, ತಪ್ಪು ಮಾಡಿದವರ ಬೆತ್ತಲೆ ಮಾಡಿ ಆಗಲಾದರು ಜನಕ್ಕೆ ಅರಿವಾಗಲಿ” ಎಂದು ಟ್ವಿಟ್ಟರಿಯಲ್ಲಿ ಆಕ್ರೋಶದಿಂದ ಬರೆದುಕೊಂಡಿದ್ದಾರೆ.
“ಶ್ರೇಷ್ಠ ಮನುಜನ್ಮ, ಅದು ನಶ್ವರ ಸತ್ಯ. ಆದರೂ ಆ ನಶ್ವರದೇಹ ನಶಿಸುವ ಮುನ್ನ ಸಾರ್ಥಕಪಡಿಸಿ ಬದುಕಬೇಕು. ನಶೆ ಹಾದರದ ಹಿಂದೆ ಬರಿ ಸಿನಿಮಾ ಅಲ್ಲಾ ಸಮಾಜವೇ ಆಕರ್ಷಶಿತ ಆಗುತ್ತಿದೆ. ಯಾರು ಶ್ರಮಪಟ್ಟು ಜೀವನ ಗೆದ್ದಿರುತ್ತಾರೆ. ಅವರ ಹೆಜ್ಜೆ ತಪ್ಪುದಾರಿ ತುಳಿಯದು. ಯಾರು ವಾಮಮಾರ್ಗದಲ್ಲಿ ಗೆದ್ದಿರುತ್ತಾರೆ ಅವರೇ ನಶೆಹಾದರದ ದಾಸರು. ಉಪ್ಪುತಿಂದವ ನೀರು ಕುಡಿಯುವ” ಎಂದು ಜಗ್ಗೇಶ್ ಹೇಳಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…