ಬೆಂಗಳೂರು: “ನಮ್ಮ ಸರಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಯ ನೀಡಿದರು.
ಬುಧವಾರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರಕಾರ ಕೆಲವು ಮಾನದಂಡ ನಿಗದಿಪಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹರ ಕಾರ್ಡ್ ರದ್ದಾಗಿದ್ದರೆ ಅವರಿಂದ ಮತ್ತೆ ಅರ್ಜಿ ಪಡೆದು ಮತ್ತೆ ಬಿಪಿಎಲ್ ಕಾರ್ಡ್ ನೀಡಲಾಗುವುದು. ಯಾರೂ ಗಾಬರಿಯಾಗುವ ಅಗತ್ಯವಿಲ್ಲ. ಕೆಲವು ಕಡೆ ಹೆಚ್ಚುಕಮ್ಮಿಯಾಗಿದ್ದು, ಎಲ್ಲವನ್ನು ಬಗೆಹರಿಸುತ್ತೇವೆ. ದಯಮಾಡಿ ಸಹಕಾರ ನೀಡಿ. ಸರಕಾರಿ ನೌಕರರು, ಸಹಕಾರಿ ಸಂಘಗಳ ಅಧಿಕಾರಿಗಳು, ಆದಾಯ ತೆರಿಗೆ ಪಾವತಿದಾರರು ಬಿಪಿಎಲ್ ಕಾರ್ಡ್ ಹೊಂದಿರುವ ಹಿನ್ನೆಲೆಯಲ್ಲಿ ಈ ಪರಿಷ್ಕರಣೆ ಮಾಡಲಾಗುತ್ತಿದೆ” ಎಂದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…