ಖ್ಯಾತ ಸಂಗೀತ ಸಂಯೋಜಕ, ಗಾಯಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಡಿವೋರ್ಸ್ ಕುರಿತು ನಿನ್ನೆ (ನ.19) ಅಧಿಕೃತವಾಗಿ ಸಾಯಿರಾ ಖಚಿತಪಡಿಸಿದ್ದರು. ಇದೀಗ ಎ.ಆರ್. ರೆಹಮಾನ್ ಅವರು ವಿಚ್ಛೇದನ ಕುರಿತು ಮೌನ ಮುರಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಎ.ಆರ್. ರೆಹಮಾನ್ ಪ್ರತಿಕ್ರಿಯಿಸಿ, ನಾವು ಇನ್ನೇನು 30 ವರ್ಷಗಳ ದಾಂಪತ್ಯಕ್ಕೆ ಕಾಲಿಡಬೇಕಿತ್ತು. ಆದರೆ, ಯಾರೂ ಊಹಿಸದ ಅಂತ್ಯ ಸಿಕ್ಕಿದೆ. ಮುರಿದ ಹೃದಯಗಳ ಭಾರಕ್ಕೆ ದೇವರ ಸಿಂಹಾಸನವೂ ನಡುಗಬಹುದು. ಆದರೂ, ಈ ಚೂರಾದ ಸಂಬಂಧದಲ್ಲೂ ನಾವು ಅರ್ಥವನ್ನು ಹುಡುಕುತ್ತೇವೆ. ಒಡೆದ ತುಣುಕುಗಳು ಮತ್ತೆ ಎಂದಿಗೂ ಒಂದಾಗಲಾರದು. ನಮ್ಮ ಖಾಸಗಿತನ ಗೌರವಿಸಿದ ಗೆಳೆಯರಿಗೆ ಧನ್ಯವಾದ ಎಂದಿದ್ದಾರೆ.
ಅಂದಹಾಗೆ, ಈ ನಿರ್ಧಾರವು ಅವರ ಸಂಬಂಧದಲ್ಲಿ ಗಮನಾರ್ಹವಾದ ಭಾವನಾತ್ಮಕ ಒತ್ತಡದ ನಂತರ ಬಂದಿದೆ. ಒಬ್ಬರಿಗೊಬ್ಬರು ಆಳವಾದ ಪ್ರೀತಿಯ ಹೊರತಾಗಿಯೂ, ಉದ್ವಿಗ್ನತೆ ಮತ್ತು ತೊಂದರೆಗಳು ತಮ್ಮ ನಡುವೆ ದುಸ್ತರವಾದ ಅಂತರವನ್ನು ಸೃಷ್ಟಿಸಿವೆ ಎಂದು ಸಾಯಿರಾ ಬಾನು ಅವರು ದಾಂಪತ್ಯ ಅಂತ್ಯವಾಗಿರುವ ಬಗ್ಗೆ ಖಚಿತಪಡಿಸಿದ್ದರು.
ಎ.ಆರ್.ರೆಹಮಾನ್ ಅವರು 1995ರಲ್ಲಿ ಸಾಯಿರಾ ಬಾನು ಅವರೊಂದಿಗೆ ವಿವಾಹವಾಗಿದ್ದರು. ದಂಪತಿಗೆ ಖತೀಜಾ, ರಹೀಮಾ ಮತ್ತು ಅಮೀನ್ ಎಂಬ ಮೂವರು ಮಕ್ಕಳಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…