ಖ್ಯಾತ ಸಂಗೀತ ಸಂಯೋಜಕ, ಗಾಯಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಡಿವೋರ್ಸ್ ಕುರಿತು ನಿನ್ನೆ (ನ.19) ಅಧಿಕೃತವಾಗಿ ಸಾಯಿರಾ ಖಚಿತಪಡಿಸಿದ್ದರು. ಇದೀಗ ಎ.ಆರ್. ರೆಹಮಾನ್ ಅವರು ವಿಚ್ಛೇದನ ಕುರಿತು ಮೌನ ಮುರಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಎ.ಆರ್. ರೆಹಮಾನ್ ಪ್ರತಿಕ್ರಿಯಿಸಿ, ನಾವು ಇನ್ನೇನು 30 ವರ್ಷಗಳ ದಾಂಪತ್ಯಕ್ಕೆ ಕಾಲಿಡಬೇಕಿತ್ತು. ಆದರೆ, ಯಾರೂ ಊಹಿಸದ ಅಂತ್ಯ ಸಿಕ್ಕಿದೆ. ಮುರಿದ ಹೃದಯಗಳ ಭಾರಕ್ಕೆ ದೇವರ ಸಿಂಹಾಸನವೂ ನಡುಗಬಹುದು. ಆದರೂ, ಈ ಚೂರಾದ ಸಂಬಂಧದಲ್ಲೂ ನಾವು ಅರ್ಥವನ್ನು ಹುಡುಕುತ್ತೇವೆ. ಒಡೆದ ತುಣುಕುಗಳು ಮತ್ತೆ ಎಂದಿಗೂ ಒಂದಾಗಲಾರದು. ನಮ್ಮ ಖಾಸಗಿತನ ಗೌರವಿಸಿದ ಗೆಳೆಯರಿಗೆ ಧನ್ಯವಾದ ಎಂದಿದ್ದಾರೆ.
ಅಂದಹಾಗೆ, ಈ ನಿರ್ಧಾರವು ಅವರ ಸಂಬಂಧದಲ್ಲಿ ಗಮನಾರ್ಹವಾದ ಭಾವನಾತ್ಮಕ ಒತ್ತಡದ ನಂತರ ಬಂದಿದೆ. ಒಬ್ಬರಿಗೊಬ್ಬರು ಆಳವಾದ ಪ್ರೀತಿಯ ಹೊರತಾಗಿಯೂ, ಉದ್ವಿಗ್ನತೆ ಮತ್ತು ತೊಂದರೆಗಳು ತಮ್ಮ ನಡುವೆ ದುಸ್ತರವಾದ ಅಂತರವನ್ನು ಸೃಷ್ಟಿಸಿವೆ ಎಂದು ಸಾಯಿರಾ ಬಾನು ಅವರು ದಾಂಪತ್ಯ ಅಂತ್ಯವಾಗಿರುವ ಬಗ್ಗೆ ಖಚಿತಪಡಿಸಿದ್ದರು.
ಎ.ಆರ್.ರೆಹಮಾನ್ ಅವರು 1995ರಲ್ಲಿ ಸಾಯಿರಾ ಬಾನು ಅವರೊಂದಿಗೆ ವಿವಾಹವಾಗಿದ್ದರು. ದಂಪತಿಗೆ ಖತೀಜಾ, ರಹೀಮಾ ಮತ್ತು ಅಮೀನ್ ಎಂಬ ಮೂವರು ಮಕ್ಕಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…