ಮಂಗಳೂರು: ಚುನಾವಣೆ ಪೂರ್ವದಲ್ಲಿ ಐದು ಉಚಿತ ಭರವಸೆ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಸರ್ಕಾರ ಬಂದು 24 ಗಂಟೆಯಲ್ಲಿ ಉಚಿತ ಭರವಸೆ ಈಡೇರಿಸುತ್ತೇವೆ ಎಂದು ಹೇಳಿದ್ದರು. ಇವತ್ತು 20 ದಿನ ಕಳೆದರೂ ಯಾವುದೇ ಯೋಜನೆ ಬಗ್ಗೆ ಮಾತನಾಡುತ್ತಿಲ್ಲ. ಆದೇಶ ಮಾಡಿದ್ದರೂ ಈವರೆಗೆ ಯಾವಾಗಿಂದ ಬರುತ್ತದೆ ಎಂಬ ಉಲ್ಲೇಖ ಇಲ್ಲ. ಸುಳ್ಳು ಆಶ್ವಾಸನೆ ಕೊಟ್ಟು ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ.
ಸಿದ್ದರಾಮಯ್ಯ ತನ್ನನ್ನೂ ಸೇರಿಸಿ ಉಚಿತ ಕರೆಂಟ್ ಅಂತ ಹೇಳಿದ್ದರು. ಎಲ್ಲ ಮಹಿಳೆಯರಿಗೂ ಹಣ ಬರುತ್ತದೆ ಎಂದು ಹೇಳಿದ್ದರು. ಅಲ್ಲದೆ ಯಾವುದೇ ಮಾನದಂಡ ಇಲ್ಲದೆ ಭಾಗ್ಯ ದೊರೆಯುತ್ತದೆ ಎಂದು ಸ್ಪಷ್ಟಪಡಿಸಿದ್ದರು ಆದರೆ ಅವುಗಳನ್ನು ಈಡೇರಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಜನ ಆಶ್ವಾಸನೆ ನಂಬಿ ಮತ ಹಾಕಿದ್ದಾರೆ, ಮತದಾರರು ಆಕ್ರೋಶದಲ್ಲಿ ಇದ್ದಾರೆ. ಕರೆಂಟ್ ಬಿಲ್ ಸಂಗ್ರಹಕ್ಕೆ ಬಂದ ಸಿಬ್ಬಂದಿ ಮೇಲೆ ಹಲ್ಲೆ ನಡೆಯುತ್ತಿದೆ. ಹೀಗಾಗಿ ನಾನೂ ಕೂಡ ಕರೆಂಟ್ ಬಿಲ್ ನೀಡಬೇಡಿ ಎಂದು ಕರೆಕೊಡುತ್ತೇನೆ.
ಜನರ ಆಕ್ರೋಶ ಸಹಜ, ಯಾರೂ ಬಿಲ್ ಕಟ್ಟಲೇ ಬಾರದು ಎಂದರು. ಈ ವೇಳೆ ಜನರಿಗೆ ತೊಂದರೆಯಾದರೆ ನಾವು ಜನರ ಪರವಾಗಿ ನಿಲ್ಲುತ್ತೇವೆ ಎಂದರು. ನೌಕರರಿಗೆ ಹಲ್ಲೆಯಾದ್ರೆ ಸರ್ಕಾರವೇ ಹೊಣೆ ಎಂದು ತಿಳಿಸಿದರು. ಕಾಂಗ್ರೆಸ್ ನ ರಾಜನೀತಿಯಿಂದ ರಾಜ್ಯದಲ್ಲಿ ಅರಾಜಕತೆ ಪ್ರಾರಂಭವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಪ್ರಾರಂಭ ಮಾಡಿದೆ. ಅಶ್ವಥ್ ನಾರಾಯಣ್ ಯಾವುದೋ ಸಂದರ್ಭ ನೀಡಿದ ಹೇಳಿಕೆಗೆ ಈಗ ಅವರ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ.
ಸಿದ್ದರಾಮಯ್ಯ ಸರ್ಕಾರ 20 ಸಾವಿರ ಕೋಟಿ ಟೆಂಡರ್ ವಾಪಾಸ್ ಪಡೆದಿದೆ. 80 ಶೇ. ಕಮಿಷನ್ ಗೆ ಡಿಮ್ಯಾಂಡ್ ಇಡಲು ಈ ರೀತಿ ಮಾಡಿದ್ದಾರೆ. ಕಾಮಗಾರಿ ಪ್ರಾರಂಭವಾದ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದೆ. ಪರ್ಸೆಂಟೇಜ್ ಗಾಗಿ ಕಾಮಗಾರಿ ನಿಲ್ಲಿಸಿದ್ದಾರೆ, ಇದು 80 ಶೇ ಪರ್ಸಂಟೇಜ್ ಸರ್ಕಾರ ಎಂದರು. ನಮ್ಮ ಸರ್ಕಾರದ ಯಾವುದೇ ವಿಚಾರ ತನಿಖೆ ಮಾಡಿ ನಾವು ಸಿದ್ದರಾಗಿದ್ದೇವೆ. ಅದರ ಜೊತೆಗೆ ಲೋಕಾಯುಕ್ತದ ಸಿದ್ದರಾಮಯ್ಯ ಕೇಸ್ ಕೂಡ ತನಿಖೆ ಆಗಲಿ. ನಮ್ಮ ಕಾಲಘಟ್ಟದ ಯಾವುದು ಬೇಕಾದ್ರೂ ತನಿಖೆ ಅಗಲಿ. ಆದರೆ 20 ಸಾವಿರ ಕೋಟಿ ಬಗ್ಗೆ ಬಹಿರಂಗ ಪಡಿಸಿ ಎಂದು ಆಗ್ರಹಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…