Featured

ಯಾರೂ ನಿರ್ಲಕ್ಷ್ಯವಹಿಸಬಾರದು, ಮಾಸ್ಕ್ ಹಾಕಬೇಕು – ಎರಡು ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು : ಕೆ. ಸುಧಾಕರ್ -Vishwanews24

ಯಾರೂ ನಿರ್ಲಕ್ಷ್ಯವಹಿಸಬಾರದು, ಮಾಸ್ಕ್ ಹಾಕಬೇಕು – ಎರಡು ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು : ಕೆ. ಸುಧಾಕರ್ -Vishwanews24

ಬೆಂಗಳೂರು: ಜನರು ತುಂಬಾನೇ ಉತ್ಸಾಹದಿಂದ ಕೊರೊನಾ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಸಿಕೆ ಡ್ರೈವ್ ಇಂದು ಕೂಡ ಮಾಡ್ತಿದ್ದೇವೆ. 7 ಕೋಟಿ 80 ಲಕ್ಷ ಡೋಸ್ ಲಸಿಕೆ ಕೊಡಲಾಗಿದೆ. ಶೇ.68 ಎರಡು ಡೋಸ್ ಪಡೆದವರ ಸಂಖ್ಯೆ ಆಗಿದೆ. ಜನರು ಉತ್ಸಾಹದಿಂದ ಲಸಿಕೆ ಹಾಕಿಸಿಕೊಳ್ತಿದ್ದಾರೆ. ಕರ್ನಾಟಕ ರಾಜ್ಯದ ಕ್ರಮ ಸರಿಯಾಗಿದೆ ಅಂತ ಕೇಂದ್ರ ಹೇಳಿದೆ. ಬೇರೆ ರಾಜ್ಯ ಕೂಡ ಇದನ್ನ ಪಾಲನೆ ಮಾಡಿ ಅಂತ ಹೇಳಿದೆ. ಯಾರು ಕೂಡ ಉದಾಸೀನ ಮಾಡಬಾರದು. ಹೊಸ ತಳಿ ಆಗಿರೋದ್ರಿಂದ ಮೃದು ಲಕ್ಷಣ ಕಾಣ್ತಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮ ನಾವು ತಗೋಬೇಕು ಎಂದು ಹೇಳಿದರು.

ಇದೇ ವೇಳೆ ಕ್ರಿಸ್ ಮಸ್ ಮತ್ತು ಹೊಸ ವರ್ಷಕ್ಕೆ ಟಫ್ ರೂಲ್ಸ್ ಜಾರಿಗೆ ತರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಈ ಬಗ್ಗೆ ಸಿಎಂ ಚರ್ಚೆ ಮಾಡ್ತಿದ್ದಾರೆ. ಆದಷ್ಟು ಬೇಗ ಸಿಎಂ ಈ ಬಗ್ಗೆ ನಿರ್ಧಾರ ಮಾಡ್ತಾರೆ. ನಾಳೆಯ ಸಭೆಯಲ್ಲೂ ಟಫ್ ರೂಲ್ಸ್ ಬಗ್ಗೆ ಚರ್ಚೆ ಆಗುತ್ತೆ ಎಂದು ತಿಳಿಸಿದರು.

ಇತಿಹಾಸದ ಸಾಂಕ್ರಾಮಿಕ ರೋಗ ನೋಡಿದ್ರೆ 2 ಅಲೆ ತೀವ್ರವಾಗಿ ಇರುತ್ತೆ. ಬಳಿಕ 3-4 ನೇ ಅಲೆ ತೀವ್ರತೆ ಕಡಿಮೆ ಇರುತ್ತೆ. ಹಾಗಾಂತ ಯಾರು ನಿರ್ಲಕ್ಷ್ಯವಹಿಸಬಾರದು. ಮಾಸ್ಕ್ ಹಾಕಬೇಕು, ಲಸಿಕೆ ಹಾಕಿಸಿಕೊಳ್ಳಬೇಕು. ಕೊರೊನಾ ಎಂಡ್ ಆಗೋ ಕೊನೆ ದಿನಗಳು ಕಂಡು ಬರುತ್ತಿವೆ. ಆದರೆ ಹಾಗಂತ ಯಾರೂ ಉದಾಸೀನ ಮಾಡಬಾರದು. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿಕೊಂಡರು.

ಇಂದು ವಿಶೇಷ ಲಸಿಕೆ ಡ್ರೈವ್ ಆಯೋಜನೆ ಮಾಡಲಾಗಿದೆ. 1,200 ಕಡೆ ಇದಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಈವರೆಗೆ 7 ಕೋಟಿ 80 ಲಕ್ಷ ಡೋಸ್ ರಾಜ್ಯದಲ್ಲಿ ನೀಡಲಾಗಿದೆ. ಶೇ.68 ಜನ ಎರಡು ಡೋಸ್ ಲಸಿಕೆ ಪಡೆದಿದ್ದಾರೆ. ಜನರು ಕೂಡ ಉತ್ಸಾಹದಿಂದ ಲಸಿಕೆ ಪಡೆಯುತ್ತಿದ್ದಾರೆ. ಕರ್ನಾಟಕದ ಕ್ರಮಗಳನ್ನು ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದೆ. ನಮ್ಮ ಮಾದರಿಯನ್ನು ಎಲ್ಲಾ ರಾಜ್ಯಗಳು ಅಳವಡಿಕೆ ಮಾಡಬೇಕು ಅಂತ ಸಲಹೆ ನೀಡಿದೆ ಎಂದರು.

ಓಮಿಕ್ರಾನ್ ಹೊಸ ತಳಿ ಆಗಿರೋದ್ರಿಂದ ಮೃದು ಲಕ್ಷಣ ಕಾಣ್ತಿದೆ. ಇದರ ತೀವ್ರತೆ ಏನು ಅಂತ ನಮಗೆ ಇನ್ನು ಗೊತ್ತಾಗಿಲ್ಲ. ಹೀಗಾಗಿ ಯಾರು ಕೂಡಾ ನಿರ್ಲಕ್ಷ್ಯ ಮಾಡಬಾರದು. ಜನರು ಎರಡು ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು. ಮಾಸ್ಕ್ ಧರಿಸಿ ಮುನ್ನೆಚ್ಚರಿಕೆ ಕ್ರಮವಹಿಸಬೇಕು. ಹೀಗಿದ್ದಾಗ ಮಾತ್ರ ಕೊರೊನಾ ವಿರುದ್ಧ ಹೋರಾಡೋಕೆ ಸಾಧ್ಯವಾಗುತ್ತೆ ಎಂದು ಹೇಳಿದರು.

ರಾಷ್ಟ್ರೀಯ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಕೂಡಾ ರಾಜ್ಯದ ಕ್ರಮಗಳನ್ನ ಮೆಚ್ಚಿಕೊಂಡಿದೆ. ಬೇರೆ ರಾಜ್ಯಗಳು ಕರ್ನಾಟಕ ಮಾದರಿ ಪಾಲನೆ ಮಾಡಿ ಅಂತ ಹೇಳಿದ್ದಾರೆ. ಹೀಗಾಗಿ ನಾವು ನಮ್ಮ ಕ್ರಮಗಳನ್ನು ಮುಂದುವರೆಸುತ್ತೇವೆ ಎಂದು ವಿವರಿಸಿದರು.

Vishwa News 24

Recent Posts

ರೈಲ್ವೇ ಪ್ರಯಾಣಿಕರಿಗೆ ಶುಭಸುದ್ದಿ: ಬೆಂಗಳೂರು, ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್​ – vishwanews24

ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು…

6 hours ago

ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ : ಪ್ರಸಾದ್ ರಾಜ್ ಕಾಂಚನ್ – vishwanews24

ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ :…

6 hours ago

ಪಡುಬಿದ್ರಿ : ಬೈಕ್ ಕಳವು ಪ್ರಕರಣ ; ಓರ್ವನ  ಬಂಧನ – vishwanews24

ಪಡುಬಿದ್ರಿ : ಬೈಕ್ ಕಳವು ಪ್ರಕರಣ - ಓರ್ವನ  ಬಂಧನ ಪಡುಬಿದ್ರಿ,: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು…

7 hours ago

ಉಡುಪಿ: ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು – vishwanews24

ಉಡುಪಿ: ಹಠಾತ್ತನೆ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು ಉಡುಪಿ: ಜಿಲ್ಲೆಯ ಹಾವಂಜೆ…

7 hours ago

ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ – vishwanews24

ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ…

8 hours ago

ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ – vishwanews24

ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ ಉಡುಪಿ:…

8 hours ago