ಯಾರೂ ಭಯಪಡಬೇಡಿ,ನೀವೆಲ್ಲರೂ ಭಾರತದ ನಾಗರಿಕರಾಗಿಯೇ ಇರುತ್ತೀರಿ. ಈ ಕಾಯ್ದೆಯಿಂದ ನಿಮಗೆ ಯಾವತ್ತೂ ತೊಂದರೆ ಯಾಗದಂತೆ ನೋಡಿಕೊಳ್ಳುತ್ತೇವೆ : ಜನಜಾಗೃತಿ ಸಮಾವೇಶದಲ್ಲಿ ರಾಜನಾಥ ಸಿಂಗ್‌ -Vishwanews24

ಮಂಗಳೂರು: “ಕೇಂದ್ರದ ನರೇಂದ್ರ ಮೋದಿ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಮುಸ್ಲಿಮರು ಸಹಿತ ಯಾರೂ ಭಯಪಡಬೇಡಿ. ನೀವೆಲ್ಲರೂ ಭಾರತದ ನಾಗರಿಕರಾಗಿಯೇ ಇರುತ್ತೀರಿ. ಈ ಕಾಯ್ದೆಯಿಂದ ನಿಮಗೆ ಯಾವತ್ತೂ ತೊಂದರೆ ಯಾಗದಂತೆ ನೋಡಿಕೊಳ್ಳುತ್ತೇವೆ’ ಎಂದು ದೇಶದ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಭರವಸೆ ನೀಡಿದ್ದಾರೆ.

ಬಿಜೆಪಿ ರಾಜ್ಯ ಸಮಿತಿಯು ಸಿಎಎ ಪರ ಜನ ಜಾಗೃತಿ ಮೂಡಿಸಲು ಮಂಗಳೂರಿನ ಕೂಳೂರು ಬಳಿಯ ಗೋಲ್ಡ್‌ಫಿಂಚ್‌ ಮೈದಾನದಲ್ಲಿ ಸೋಮವಾರ ಆಯೋಜಿ ಸಿದ್ದ ಬೃಹತ್‌ ಸಮಾವೇಶದಲ್ಲಿ ರಾಜನಾಥ ಸಿಂಗ್‌ ದಿಕ್ಸೂಚಿ ಭಾಷಣ ಮಾಡಿದರು. ಕಾಂಗ್ರೆಸ್‌ನವರು ಸಿಎಎ ಮುಂದಿಟ್ಟುಕೊಂಡು ಮುಸ್ಲಿಮರಲ್ಲಿ ಭಯದ ವಾತಾವರಣ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಆ ಮೂಲಕ ಅಶಾಂತಿ ಸೃಷ್ಟಿಸುವ ಪ್ರಯತ್ನವಿದು. ಆದರೆ ಈ ದೇಶದ ಮುಸ್ಲಿಮರು ಕಾಂಗ್ರೆಸ್‌ನವರ ಈ ರೀತಿಯ ಯತ್ನಕ್ಕೆ ಕಿವಿಗೊಡಬಾರದು. ಮುಸ್ಲಿಮರ ಜತೆಗೆ ಬಿಜೆಪಿಯಿದ್ದು, ಸಿಎಎ ಬಗ್ಗೆ ಆತಂಕಪಡಬೇಕಾಗಿಲ್ಲ ಎಂದರು.

ಸರ್ವಧರ್ಮ ಸಮಭಾವ ಭಾರತದ ಸಂಸ್ಕೃತಿ. ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌, ಸಬ್‌ ಕಾ ವಿಶ್ವಾಸ್‌ ಪ್ರಧಾನಿ ಮೋದಿ ಅವರ ಆಡಳಿತ ಧ್ಯೇಯ. ಸರಕಾರದ ಯಾವುದೇ ಸೌಲಭ್ಯಗಳನ್ನು ಧರ್ಮದ ಆಧಾರದಲ್ಲಿ ನೀಡಿಲ್ಲ. ಸಿಎಎ ಕಾನೂನು ಯಾವುದೇ ಸಮುದಾಯ, ಧರ್ಮಕ್ಕೆ ಹೊಡೆತ ನೀಡಲು ಮಾಡಿದ್ದಲ್ಲ. ಬಿಜೆಪಿ ಕಾರ್ಯ ಕರ್ತರು ಇದನ್ನು ಮುಸ್ಲಿಂ ಸಹೋದರರಿಗೆ ಮನವರಿಕೆ ಮಾಡಬೇಕು ಎಂದವರು ಕರೆ ನೀಡಿದರು. ಭಾರತವು ವಿಭಜನೆಯಾದಾಗ ಪಾಕಿಸ್ಥಾನದಲ್ಲಿ ಧಾರ್ಮಿಕ ಕಾರಣಗಳಿಂದ ದೌರ್ಜನ್ಯಕ್ಕೊಳಗಾದವರು ಭಾರತಕ್ಕೆ ಬರಲು ಬಯಸಿದರೆ ಅದಕ್ಕೆ ಭಾರತ ಸ್ಪಂದಿಸಬೇಕೆಂದು ಗಾಂಧೀಜಿಯವರು ನೆಹರೂರನ್ನು ಕೋರಿದ್ದರು.

ಅಂಥವರಿಗೆ ಪೌರತ್ವ ನೀಡಬೇಕು ಎಂದಿದ್ದರು. ಅಂದು ಗಾಂಧೀಜಿ ಬಯಸಿದ್ದನ್ನು ಮೋದಿ ಸರಕಾರ ಈಗ ಸಾಕಾರ ಗೊಳಿಸಿದೆ. ಸಿಎಎ ಜಾರಿಗೆ ತಂದು ಭಾರತ ತನ್ನ ನೈತಿಕ ಕರ್ತವ್ಯವನ್ನು ಪೂರೈಸಿದೆ ಎಂದು ರಕ್ಷಣಾ ಸಚಿವರು ನುಡಿದರು.

Vishwa News 24

Recent Posts

ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ ನೇಮಕ – vishwanews24

ಉಡುಪಿ, ದ. ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್, ರೋಹಿಣಿ ಸಿಂಧೂರಿ ನೇಮಕ ಬೆಂಗಳೂರು:…

2 hours ago

ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್‌ ಖಂಡ್ರೆ – vishwanews24

ಆ.15ರೊಳಗೆ ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮಾ ಗಾಂಧಿ ಹೆಸರು : ಸಚಿವ ಈಶ್ವರ್‌ ಖಂಡ್ರೆ ಬೆಂಗಳೂರು : ಆಗಸ್ಟ್ 15ರ…

2 hours ago

ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ – vishwanews24

ಸಾವಿನಲ್ಲೂ ಸಾರ್ಥಕತೆ: ವೈದ್ಯಕೀಯ ಶಿಕ್ಷಣಕ್ಕಾಗಿ ಮೃತದೇಹ ದಾನ ಮಾಡಿದ ಕುಟುಂಬ ಮಂಗಳೂರು: ʼಸಾವಿನ ನಂತರವೂ ಬದುಕಬಹುದು, ಸಮಾಜಕ್ಕೆ ಉಪಕಾರವಾಗುವ ಮೂಲಕʼ…

2 hours ago

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ – vishwanews24

ಮಂಗಳೂರು ನಗರ/ ಗ್ರಾಮಾಂತರ: ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ…

2 hours ago

ಬೆಳ್ತಂಗಡಿ: ಹಾವು ಕಚ್ಚಿ ಬಾಲಕಿ ಗಂಭೀರ – vishwanews24

ಬೆಳ್ತಂಗಡಿ: ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು…

2 hours ago

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ – vishwanews24

ವಂಚನೆ ಪ್ರಕರಣ :  ಝೀನತ್ ಜಾಮೀನು ಅರ್ಜಿ ತಿರಸ್ಕೃತ ಉಡುಪಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರಿಯ ಝೀನತ್ ಇಬ್ರಾಹಿಂ ಜಾಮೀನಿಗಾಗಿ…

3 hours ago