ಮಂಗಳೂರು: “ಕೇಂದ್ರದ ನರೇಂದ್ರ ಮೋದಿ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಮುಸ್ಲಿಮರು ಸಹಿತ ಯಾರೂ ಭಯಪಡಬೇಡಿ. ನೀವೆಲ್ಲರೂ ಭಾರತದ ನಾಗರಿಕರಾಗಿಯೇ ಇರುತ್ತೀರಿ. ಈ ಕಾಯ್ದೆಯಿಂದ ನಿಮಗೆ ಯಾವತ್ತೂ ತೊಂದರೆ ಯಾಗದಂತೆ ನೋಡಿಕೊಳ್ಳುತ್ತೇವೆ’ ಎಂದು ದೇಶದ ರಕ್ಷಣಾ ಸಚಿವ ರಾಜನಾಥ ಸಿಂಗ್ ಭರವಸೆ ನೀಡಿದ್ದಾರೆ.
ಬಿಜೆಪಿ ರಾಜ್ಯ ಸಮಿತಿಯು ಸಿಎಎ ಪರ ಜನ ಜಾಗೃತಿ ಮೂಡಿಸಲು ಮಂಗಳೂರಿನ ಕೂಳೂರು ಬಳಿಯ ಗೋಲ್ಡ್ಫಿಂಚ್ ಮೈದಾನದಲ್ಲಿ ಸೋಮವಾರ ಆಯೋಜಿ ಸಿದ್ದ ಬೃಹತ್ ಸಮಾವೇಶದಲ್ಲಿ ರಾಜನಾಥ ಸಿಂಗ್ ದಿಕ್ಸೂಚಿ ಭಾಷಣ ಮಾಡಿದರು. ಕಾಂಗ್ರೆಸ್ನವರು ಸಿಎಎ ಮುಂದಿಟ್ಟುಕೊಂಡು ಮುಸ್ಲಿಮರಲ್ಲಿ ಭಯದ ವಾತಾವರಣ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಆ ಮೂಲಕ ಅಶಾಂತಿ ಸೃಷ್ಟಿಸುವ ಪ್ರಯತ್ನವಿದು. ಆದರೆ ಈ ದೇಶದ ಮುಸ್ಲಿಮರು ಕಾಂಗ್ರೆಸ್ನವರ ಈ ರೀತಿಯ ಯತ್ನಕ್ಕೆ ಕಿವಿಗೊಡಬಾರದು. ಮುಸ್ಲಿಮರ ಜತೆಗೆ ಬಿಜೆಪಿಯಿದ್ದು, ಸಿಎಎ ಬಗ್ಗೆ ಆತಂಕಪಡಬೇಕಾಗಿಲ್ಲ ಎಂದರು.
ಸರ್ವಧರ್ಮ ಸಮಭಾವ ಭಾರತದ ಸಂಸ್ಕೃತಿ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಪ್ರಧಾನಿ ಮೋದಿ ಅವರ ಆಡಳಿತ ಧ್ಯೇಯ. ಸರಕಾರದ ಯಾವುದೇ ಸೌಲಭ್ಯಗಳನ್ನು ಧರ್ಮದ ಆಧಾರದಲ್ಲಿ ನೀಡಿಲ್ಲ. ಸಿಎಎ ಕಾನೂನು ಯಾವುದೇ ಸಮುದಾಯ, ಧರ್ಮಕ್ಕೆ ಹೊಡೆತ ನೀಡಲು ಮಾಡಿದ್ದಲ್ಲ. ಬಿಜೆಪಿ ಕಾರ್ಯ ಕರ್ತರು ಇದನ್ನು ಮುಸ್ಲಿಂ ಸಹೋದರರಿಗೆ ಮನವರಿಕೆ ಮಾಡಬೇಕು ಎಂದವರು ಕರೆ ನೀಡಿದರು. ಭಾರತವು ವಿಭಜನೆಯಾದಾಗ ಪಾಕಿಸ್ಥಾನದಲ್ಲಿ ಧಾರ್ಮಿಕ ಕಾರಣಗಳಿಂದ ದೌರ್ಜನ್ಯಕ್ಕೊಳಗಾದವರು ಭಾರತಕ್ಕೆ ಬರಲು ಬಯಸಿದರೆ ಅದಕ್ಕೆ ಭಾರತ ಸ್ಪಂದಿಸಬೇಕೆಂದು ಗಾಂಧೀಜಿಯವರು ನೆಹರೂರನ್ನು ಕೋರಿದ್ದರು.
ಅಂಥವರಿಗೆ ಪೌರತ್ವ ನೀಡಬೇಕು ಎಂದಿದ್ದರು. ಅಂದು ಗಾಂಧೀಜಿ ಬಯಸಿದ್ದನ್ನು ಮೋದಿ ಸರಕಾರ ಈಗ ಸಾಕಾರ ಗೊಳಿಸಿದೆ. ಸಿಎಎ ಜಾರಿಗೆ ತಂದು ಭಾರತ ತನ್ನ ನೈತಿಕ ಕರ್ತವ್ಯವನ್ನು ಪೂರೈಸಿದೆ ಎಂದು ರಕ್ಷಣಾ ಸಚಿವರು ನುಡಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…