ನವದೆಹಲಿ: ‘ಯಾರೇ ಆಗಿರಲಿ, ಯಾರ ಮಗನೇ ಆಗಿರಲಿ, ಅಂತಹ ಅಹಂಕಾರ ಮತ್ತು ದುರ್ವರ್ತನೆಯನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರ ಮಗ, ಶಾಸಕ ಆಕಾಶ್ ವಿಜಯವರ್ಗೀಯ ಅವರು ಇತ್ತೀಚೆಗೆ ಅಧಿಕಾರಿಯೊಬ್ಬರಿಗೆ ಕ್ರಿಕೆಟ್ ಬ್ಯಾಟ್ನಿಂದ ಹೊಡೆದ ಪ್ರಕರಣ ದಾಖಲಾಗಿತ್ತು. ಅವರನ್ನು ಬಂಧಿಸಿ ಬಳಿಕ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿತ್ತು
ಇಂತಹ ವರ್ತನೆ ಪಕ್ಷಕ್ಕೆ ಕೆಟ್ಟ ಹೆಸರು ತರುತ್ತದೆ ಮತ್ತು ಅದು ಸ್ವೀಕಾರಾರ್ಹವಲ್ಲ. ಯಾರಾದರೂ ತಪ್ಪು ಮಾಡಿದರೆ ಕ್ಷಮೆ ಯಾಚಿಸುವ ಮನೋಭಾವವಾದರೂ ಇರಬೇಕು ಎಂದು ಮೋದಿ ಹೇಳಿದರು. ಆಕಾಶ್ ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಲ್ಲದೆ ಕ್ಷಮೆ ಯಾಚಿಸಲು ನಿರಾಕರಿಸಿದ್ದರು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭಾರಿ ಗೆಲುವು ಪಡೆದ ಬಳಿಕ ನಡೆದ ಮೊದಲ ಸಂಸದೀಯ ಪಕ್ಷ ಸಭೆಯಲ್ಲಿ ಅವರು ಮಾತನಾಡಿದರು. ಹಿರಿಯ ಮುಖಂಡರು ಈ ಸಂದರ್ಭದಲ್ಲಿ ಮೋದಿ ಅವರನ್ನು ಸನ್ಮಾನಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…