Featured

ಯಾರೇ ಬಂದರೂ ಈ ಹಿಂದೂ ದೇಶವನ್ನು ಮತಾಂತರ ಮಾಡಲು ಸಾಧ್ಯವಿಲ್ಲ : ಡಾ. ಕಲ್ಲಡ್ಕ ಪ್ರಭಾಕರ್‌ ಭಟ್‌ -Vishwanews24

ಜಗತ್ತಿನಲ್ಲೇ ಸರ್ವ ಶ್ರೇಷ್ಠ ಧರ್ಮ ಎಂದರೆ ಹಿಂದೂ ಧರ್ಮ, ಯಾರೇ ಬಂದರೂ ಈ ಹಿಂದೂ ದೇಶವನ್ನು ಮತಾಂತರ ಮಾಡಲು ಸಾಧ್ಯವಿಲ್ಲ , : ಡಾ. ಕಲ್ಲಡ್ಕ ಪ್ರಭಾಕರ್‌ ಭಟ್‌

ಬೆಳ್ಮಣ್‌ : ಮೋಸದಿಂದ ಹಿಂದೂಗಳನ್ನು ಮತಾಂತರ ಮಾಡುವ ಕೆಲಸ ಕೊನೆಗೊಳ್ಳಲಿ. ಯಾರೇ ಬಂದರೂ ಈ ಹಿಂದೂ ದೇಶವನ್ನು ಮತಾಂತರ ಮಾಡಲು ಸಾಧ್ಯವಿಲ್ಲ. ಹಿಂದೂ ಧರ್ಮವನ್ನು ಎಂದೂ ಕೆಣಕದಿರಿ. ಜಗತ್ತಿನಲ್ಲೇ ಸರ್ವ ಶ್ರೇಷ್ಠ ಧರ್ಮ ಎಂದರೆ ಹಿಂದೂ ಧರ್ಮ ಎಂದು ಆರೆಸ್ಸೆಸ್‌ ಮುಖಂಡ ಹಾಗೂ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ‍್ಯಕಾರಿಣಿ ಸದಸ್ಯ ಡಾ. ಕಲ್ಲಡ್ಕ ಪ್ರಭಾಕರ್‌ ಭಟ್‌ ಹೇಳಿದರು.

‘ಭಾರತ ಹಿಂದು ರಾಷ್ಟ್ರ, ಮುಸ್ಲಿಮರು ಬರಕೂಡದು’ ಎಂದವನ ಮೇಲೆ ಹಲ್ಲೆ ಮಾಡಿದವರ ಬಂಧನ ವಿಹಿಂಪ, ಭಜರಂಗದಳ ಕಾರ್ಕಳ ಪ್ರಖಂಡ ವತಿಯಿಂದ ಬೆಳ್ಮಣ್‌ನಲ್ಲಿ ಜರುಗಿದ ‘ಮತಾಂತರದ ವಿರುದ್ಧ ಬೆಳ್ಮಣ್‌ ಚಲೋ’ ಬೃಹತ್‌ ಜನಾಂದಲೋನ ಸಭೆಯಲ್ಲಿ ಮಾಡಿದ ದಿಕ್ಸೂಚಿ ಭಾಷಣದಲ್ಲಿ ಹೇಳಿದ್ದಾರೆ. ಮತಾಂತರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಸಹಾಯಕ ಎಸ್ಪಿ ಕುಮಾರ್‌ ಚಂದ್ರ, ಕಾರ್ಕಳ ಗ್ರಾಮಾಂತರ ಠಾಣಾಧಿಕಾರಿ ನಾಸಿರ್‌ ಹುಸೇನ್‌ ಅವರಿಗೆ ಹಿಂದೂ ಮುಖಂಡರು ಮನವಿ ಸಲ್ಲಿಸಿದರು. ನಂದಳಿಕೆ ಚಾವಡಿ ಅರಮನೆ ಸುಹಾಸ್‌ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯಅತಿಥಿಗಳಾಗಿ ಜಿಲ್ಲಾ ಹಿಂಜಾವೇ ಕಾರ‍್ಯದರ್ಶಿ ಪ್ರಕಾಶ್‌ ಕುಕ್ಕೆಹಳ್ಳಿ, ಜಿಲ್ಲಾ ಗೋರಕ್ಷಾ ಪ್ರಮುಖ್‌ ದಿನೇಶ್‌ ಶೆಟ್ಟಿ ಹೆಬ್ರಿ, ವಿಹಿಂಪ ಜಿಲ್ಲಾ ಗೋರಕ್ಷ ಪ್ರಮುಖ್‌ ಉಮೇಶ್‌ ನಾಯಕ್‌ ಸೂಡ, ಭಜರಂಗದಳ ತಾಲೂಕು ಸಂಚಾಲಕ ಗುರುಪ್ರಸಾದ್‌ ನಾರಾವಿ, ಬೆಳ್ಮಣ್‌ ವಲಯ ವಿಹಿಂಪ ಅಧ್ಯಕ್ಷ ಪ್ರಸಾದ್‌ ಶೆಟ್ಟಿ ಕಾಡಿ ಕಂಬಳ, ಹಿಂದೂ ಮುಖಂಡ ರತ್ನಾಕರ್‌ ಅಮೀನ್‌ ಉಪಸ್ಥಿತರಿದ್ದರು. ಭಾರತ ಹಿಂದೂ ರಾಷ್ಟ್ರ ಘೋಷಣೆಯಾಗಲಿ ಜಿಲ್ಲಾ ಭಜರಂಗದಳ ಸುರಕ್ಷ ಪ್ರಮುಖ್‌ ಮಹೇಶ್‌ ಬೈಲೂರು ಸ್ವಾಗತಿಸಿದರು. ಧರ್ಮ ಜಾಗರಣ ಮಂಗಳೂರು ವಿಭಾಗ ಸಹ ಸಂಯೋಜಕ ಪ್ರಸಾದ್‌ ಶೆಟ್ಟಿ ಕುತ್ಯಾರು ಪ್ರಾಸ್ತಾವಿಕ ಮಾತನಾಡಿದರು. ಅಶೋಕ್‌ ನಾರಾವಿ ನಿರೂಪಿಸಿದರು. ಜಯಪ್ರಕಾಶ್‌ ಪ್ರಭು ವಂದಿಸಿದರು.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

15 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago