ಜಗತ್ತಿನಲ್ಲೇ ಸರ್ವ ಶ್ರೇಷ್ಠ ಧರ್ಮ ಎಂದರೆ ಹಿಂದೂ ಧರ್ಮ, ಯಾರೇ ಬಂದರೂ ಈ ಹಿಂದೂ ದೇಶವನ್ನು ಮತಾಂತರ ಮಾಡಲು ಸಾಧ್ಯವಿಲ್ಲ , : ಡಾ. ಕಲ್ಲಡ್ಕ ಪ್ರಭಾಕರ್ ಭಟ್
ಬೆಳ್ಮಣ್ : ಮೋಸದಿಂದ ಹಿಂದೂಗಳನ್ನು ಮತಾಂತರ ಮಾಡುವ ಕೆಲಸ ಕೊನೆಗೊಳ್ಳಲಿ. ಯಾರೇ ಬಂದರೂ ಈ ಹಿಂದೂ ದೇಶವನ್ನು ಮತಾಂತರ ಮಾಡಲು ಸಾಧ್ಯವಿಲ್ಲ. ಹಿಂದೂ ಧರ್ಮವನ್ನು ಎಂದೂ ಕೆಣಕದಿರಿ. ಜಗತ್ತಿನಲ್ಲೇ ಸರ್ವ ಶ್ರೇಷ್ಠ ಧರ್ಮ ಎಂದರೆ ಹಿಂದೂ ಧರ್ಮ ಎಂದು ಆರೆಸ್ಸೆಸ್ ಮುಖಂಡ ಹಾಗೂ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು.
‘ಭಾರತ ಹಿಂದು ರಾಷ್ಟ್ರ, ಮುಸ್ಲಿಮರು ಬರಕೂಡದು’ ಎಂದವನ ಮೇಲೆ ಹಲ್ಲೆ ಮಾಡಿದವರ ಬಂಧನ ವಿಹಿಂಪ, ಭಜರಂಗದಳ ಕಾರ್ಕಳ ಪ್ರಖಂಡ ವತಿಯಿಂದ ಬೆಳ್ಮಣ್ನಲ್ಲಿ ಜರುಗಿದ ‘ಮತಾಂತರದ ವಿರುದ್ಧ ಬೆಳ್ಮಣ್ ಚಲೋ’ ಬೃಹತ್ ಜನಾಂದಲೋನ ಸಭೆಯಲ್ಲಿ ಮಾಡಿದ ದಿಕ್ಸೂಚಿ ಭಾಷಣದಲ್ಲಿ ಹೇಳಿದ್ದಾರೆ. ಮತಾಂತರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಸಹಾಯಕ ಎಸ್ಪಿ ಕುಮಾರ್ ಚಂದ್ರ, ಕಾರ್ಕಳ ಗ್ರಾಮಾಂತರ ಠಾಣಾಧಿಕಾರಿ ನಾಸಿರ್ ಹುಸೇನ್ ಅವರಿಗೆ ಹಿಂದೂ ಮುಖಂಡರು ಮನವಿ ಸಲ್ಲಿಸಿದರು. ನಂದಳಿಕೆ ಚಾವಡಿ ಅರಮನೆ ಸುಹಾಸ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯಅತಿಥಿಗಳಾಗಿ ಜಿಲ್ಲಾ ಹಿಂಜಾವೇ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ, ಜಿಲ್ಲಾ ಗೋರಕ್ಷಾ ಪ್ರಮುಖ್ ದಿನೇಶ್ ಶೆಟ್ಟಿ ಹೆಬ್ರಿ, ವಿಹಿಂಪ ಜಿಲ್ಲಾ ಗೋರಕ್ಷ ಪ್ರಮುಖ್ ಉಮೇಶ್ ನಾಯಕ್ ಸೂಡ, ಭಜರಂಗದಳ ತಾಲೂಕು ಸಂಚಾಲಕ ಗುರುಪ್ರಸಾದ್ ನಾರಾವಿ, ಬೆಳ್ಮಣ್ ವಲಯ ವಿಹಿಂಪ ಅಧ್ಯಕ್ಷ ಪ್ರಸಾದ್ ಶೆಟ್ಟಿ ಕಾಡಿ ಕಂಬಳ, ಹಿಂದೂ ಮುಖಂಡ ರತ್ನಾಕರ್ ಅಮೀನ್ ಉಪಸ್ಥಿತರಿದ್ದರು. ಭಾರತ ಹಿಂದೂ ರಾಷ್ಟ್ರ ಘೋಷಣೆಯಾಗಲಿ ಜಿಲ್ಲಾ ಭಜರಂಗದಳ ಸುರಕ್ಷ ಪ್ರಮುಖ್ ಮಹೇಶ್ ಬೈಲೂರು ಸ್ವಾಗತಿಸಿದರು. ಧರ್ಮ ಜಾಗರಣ ಮಂಗಳೂರು ವಿಭಾಗ ಸಹ ಸಂಯೋಜಕ ಪ್ರಸಾದ್ ಶೆಟ್ಟಿ ಕುತ್ಯಾರು ಪ್ರಾಸ್ತಾವಿಕ ಮಾತನಾಡಿದರು. ಅಶೋಕ್ ನಾರಾವಿ ನಿರೂಪಿಸಿದರು. ಜಯಪ್ರಕಾಶ್ ಪ್ರಭು ವಂದಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…