ಮುಂಬೈ : ಅತೃಪ್ತ ಕಾಂಗ್ರೆಸ್ -ಜೆಡಿಎಸ್ ಶಾಸಕರು ರಾಜೀನಾಮೆ ನೀಡಿ, ಮುಂಬೈನ ಹೊಟೇಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಇಂತಹ ಶಾಸಕರು ತಾವು ಸದನಕ್ಕೆ ಬರುವುದಲ್ಲ. ಯಾರೇ ಮನವೊಲಿಸಿದರೂ ಹಾಜರಾಗುವುದಿಲ್ಲ ಎಂದು ತಮ್ಮ ನಿಲುವನ್ನು ಮತ್ತೆ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮುಂಬೈನಲ್ಲಿ ಅಜ್ಞಾತ ಸ್ಥಳದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅತೃಪ್ತ ಕಾಂಗ್ರೆಸ್-ಜೆಡಿಎಸ್ ಶಾಸಕರು, ವಿಶ್ವಾಸಮತಕ್ಕೆ ನಾವು ಬರುವುದಿಲ್ಲ. ಯಾರೇ ಮನವೊಲಿಸಿದರೂ ಬರೋಲ್ಲ. ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದು ಮತ್ತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಈ ಹಿನ್ನಲೆಯಲ್ಲಿ ವಿಶ್ವಾಸಮತ ಸಾಭೀತು ಪಡಿಸುವ ವೇಳೆ 16 ರಾಜೀನಾಮೆ ನೀಡಿರುವ ಶಾಸಕರು ಬಾರದೇ ಹೋದರೇ, ದೋಸ್ತಿ ಖತಂ ಆಗೋದು ಗ್ಯಾರಂಟಿ. ಈ ಮೂಲಕ ಮೈತ್ರಿ ಸರ್ಕಾರ ಬಿದ್ದು ಹೋಗೋದು ನಿಜ ಎಂದು ಅನೇಕ ರಾಜಕೀಯ ನಾಯಕರ ವಿಶ್ಲೇಷಣೆಯಾಗಿದೆ.
ಸದನಕ್ಕೆ ಹಾಜರಾಗಲೇಬೇಕು ಎಂದು ಈಗಾಗಲೇ ಮೈತ್ರಿ ಸರ್ಕಾರ ತಮ್ಮ ಅತೃಪ್ತ ಶಾಸಕರಿಗೆ ವಿಪ್ ಜಾರಿ ಮಾಡಿತ್ತು. ಆದರೆ, ಈ ವಿಪ್ ಪಾಲನೆ ಮಾಡುವುದು ಕಡ್ಡಾಯವಲ್ಲ ಎಂದು ಈಗ ಸುಪ್ರೀಂ ಕೋರ್ಟ್ ತಿಳಿಸಿದೆ. ಅದರಂತೆ ಅತೃಪ್ತರು ಕೂಡ ನಾಳೆ ಸದನಕ್ಕೆ ಗೈರಾಗಲಿದ್ದು, ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಹುಮತ ಕಳೆದುಕೊಳ್ಳಲಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…