Featured

ಯಾರೋ ಒಂದಿಬ್ಬರು ಸೋಶಿಯಲ್ ಮೀಡಿಯಾದಲ್ಲಿ ಏನೋ ಗೀಚಿದ ಮಾತ್ರಕ್ಕೆ ನಮ್ಮ ಸಂಪ್ರದಾಯ ಬದಲಾಗಲ್ಲ : ಸ್ಪೀಕರ್ ಖಾದರ್ – vishwanews24

ಹರಕೆಯ ಕೋಲದಲ್ಲಿ ಭಾಗಿಯಾಗಿದ್ದ ಸ್ಪೀಕರ್ ಖಾದರ್ ವಿರುದ್ದ ಮುಸ್ಲಿಂ ಮುಖಂಡನ ಟೀಕೆಗೆ ಸ್ಪೀಕರ್ ಖಾದರ್ ತಿರುಗೇಟು..

ಯಾರೋ ಒಂದಿಬ್ಬರು ಸೋಶಿಯಲ್ ಮೀಡಿಯಾದಲ್ಲಿ ಏನೋ ಗೀಚಿದ ಮಾತ್ರಕ್ಕೆ ನಮ್ಮ ಸಂಪ್ರದಾಯ ಬದಲಾಗಲ್ಲ..

ಹರಕೆ, ಕೋಲವನ್ನು ಗೌರವಿಸುವುದು ನಮ್ಮ ಸಂಸ್ಕೃತಿ

ನಾವು ಮಾಡೋ ಕೆಲಸಗಳನ್ನು ಮಾತ್ರ ಇತಿಹಾಸ ನೆನಪಿಡುತ್ತದೆ..

ಯಾರೋ ಒಬ್ಬ ಸೋಶಿಯಲ್ ಮೀಡಿಯಾದಲ್ಲಿ ಗೀಚುವರರನ್ನು ಇತಿಹಾಸ ನೆನಪಿಟ್ಟುಕೊಳ್ಳುವುದಿಲ್ಲ..

ಅವರ ಮಾತಿಗೆ ಬೆಲೆ ಕೋಡಬೇಕಾಗಿಲ್ಲ, ಅದರ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗುವುದಿಲ್ಲ

ಬೆಂಗಳೂರು: ಹರಕೆಯ ಕೋಲದಲ್ಲಿ ಭಾಗಿಯಾಗಿದ್ದ ಸ್ಪೀಕರ್ ಖಾದರ್ ವಿರುದ್ದ ಮುಸ್ಲಿಂ ಮುಖಂಡರೊಬ್ಬರು ಟೀಕಿಸಿದ್ದಕ್ಕೆ ಸ್ಪೀಕರ್ ಖಾದರ್ ತಿರುಗೇಟು ನೀಡಿದ್ದು, ಯಾರೋ ಒಂದಿಬ್ಬರು ಸೋಶಿಯಲ್ ಮೀಡಿಯಾದಲ್ಲಿ ಏನೋ ಗೀಚಿದ ಮಾತ್ರಕ್ಕೆ ನಮ್ಮ ಸಂಪ್ರದಾಯ ಬದಲಾಗಲ್ಲ. ನನ್ನ ಕೆಲಸವನ್ನು ನೂರಾರು ಮಂದಿ ಸ್ವೀಕಾರ ಮಾಡುತ್ತಾರೆ, ಗೌರವಿಸುತ್ತಾರೆ. ನಾವು ಮಾಡೋ ಕೆಲಸಗಳನ್ನು ಮಾತ್ರ ಇತಿಹಾಸ ನೆನಪಿಡುತ್ತದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ನಮ್ಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಅವರ ಇಚ್ಚೆಯಂತೆ ಹರಕೆ ಹೇಳಿಕೊಂಡಿದ್ದರು. ಅದಕ್ಕೆ ಹೋಗಿದ್ದೇನೆ, ಹರಕೆ, ಕೋಲವನ್ನು ಗೌರವಿಸುವುದು ನಮ್ಮ ಸಂಸ್ಕೃತಿ ಎಂದು ಸ್ಪೀಕರ್ ಯುಟಿ ಖಾದರ್ ಸ್ಪಷ್ಟನೆ ನೀಡಿದ್ದಾರೆ.

ಯಾರೋ ಒಬ್ಬ ಸೋಶಿಯಲ್ ಮೀಡಿಯಾದಲ್ಲಿ ಗೀಚುವರರನ್ನು ಇತಿಹಾಸ ನೆನಪಿಟ್ಟುಕೊಳ್ಳುವುದಿಲ್ಲ, ಯಾರು ಕೆಲಸ ಮಾಡುತ್ತಾರೋ ಅವರನ್ನು ಮಾತ್ರ ಇತಿಹಾಸ ನೆನಪಿಟ್ಟುಕೊಳ್ಳುತ್ತೆ. ಒಬ್ಬ ಹೇಳಿದ ಅಂತ ಎಲ್ಲರೂ ಹೇಳುವುದಿಲ್ಲ. ಅವರ ಮಾತಿಗೆ ಬೆಲೆ ಕೋಡಬೇಕಾಗಿಲ್ಲ ಎಂದರು. ಅದರ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗುವುದಿಲ್ಲ. ಎಲ್ಲ ಸಂಸ್ಕೃತಿಗೆ ಗೌರವ ಕೋಡಬೇಕು ಎಂದರು.

ಪಣೋಲಿಬೈಲಿನಲ್ಲಿ ಹರಕೆ ಕೋಲದಲ್ಲಿ ಭಾಗವಹಿಸಿದ ಯುಟಿ ಖಾದರ್ ಬಗ್ಗೆ ಫೇಸ್ಬುಕ್ ನಲ್ಲಿ ಸಾಲೆತ್ತೂರಿನ ಧರ್ಮಗುರು ಫೈಝಿ ಅಲ್ ಹಮ್ದಾನಿ ಎಂಬವರು ಟೀಕಿಸಿ ಬರೆದಿದ್ದರು. ಕೊರಗಜ್ಜನ ಭಕ್ತ ಯುಟಿ ಖಾದರ್ ಅವರನ್ನು ಮುಸ್ಲಿಮರು ಕೇವಲ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಖಂಡರಾಗಿ ಕಾಣುವುದು ಬೇಡ. ಉಲೆಮಾ, ಸಾತ್ವಿಕರು ತುಂಬಿದ ಧಾರ್ಮಿಕ ವೇದಿಕೆಗೆ ಮುಸ್ಲಿಂ ನಾಯಕನಾಗಿ ಹತ್ತಿಸುವುದು ತರವಲ್ಲ. ಅದು ಆತನ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾಗುತ್ತದೆ. ಖಾದರ್ ಕೊರಗಜ್ಜನಿಗೂ ಕಲ್ಲುರ್ಟಿ ಪಂಜುರ್ಲಿಗೂ ಆರಾಧಿಸಲಿ. ಪ್ರಸಾದ ಪಡೆದು ತಲೆಗೆ ಮೆತ್ತಿಕೊಂಡು ನರಕಕ್ಕೆ ಹೋಗಲಿ. ಅದು ಆತನ ವೈಯಕ್ತಿಕ ಸ್ವಾತಂತ್ರ್ಯ. ಅದನ್ನು ಭಾರತದಲ್ಲಿ ತಡೆಯುವ ಸ್ವಾತಂತ್ರ್ಯ ತನಗೆ ಇಲ್ಲ. ಆದರೆ ಆತನಿಗೆ ಉಲೆಮಾಗಳು ಗೌರವಿಸುವುದು ಕೆಟ್ಟ ಸಂದೇಶ ನೀಡುತ್ತದೆ ಎಂದು ಹೇಳಿದ್ದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

12 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago