Featured

ಯಾರೋ ಒಂದಿಬ್ಬರು ಸೋಶಿಯಲ್ ಮೀಡಿಯಾದಲ್ಲಿ ಏನೋ ಗೀಚಿದ ಮಾತ್ರಕ್ಕೆ ನಮ್ಮ ಸಂಪ್ರದಾಯ ಬದಲಾಗಲ್ಲ : ಸ್ಪೀಕರ್ ಖಾದರ್ – vishwanews24

ಹರಕೆಯ ಕೋಲದಲ್ಲಿ ಭಾಗಿಯಾಗಿದ್ದ ಸ್ಪೀಕರ್ ಖಾದರ್ ವಿರುದ್ದ ಮುಸ್ಲಿಂ ಮುಖಂಡನ ಟೀಕೆಗೆ ಸ್ಪೀಕರ್ ಖಾದರ್ ತಿರುಗೇಟು..

ಯಾರೋ ಒಂದಿಬ್ಬರು ಸೋಶಿಯಲ್ ಮೀಡಿಯಾದಲ್ಲಿ ಏನೋ ಗೀಚಿದ ಮಾತ್ರಕ್ಕೆ ನಮ್ಮ ಸಂಪ್ರದಾಯ ಬದಲಾಗಲ್ಲ..

ಹರಕೆ, ಕೋಲವನ್ನು ಗೌರವಿಸುವುದು ನಮ್ಮ ಸಂಸ್ಕೃತಿ

ನಾವು ಮಾಡೋ ಕೆಲಸಗಳನ್ನು ಮಾತ್ರ ಇತಿಹಾಸ ನೆನಪಿಡುತ್ತದೆ..

ಯಾರೋ ಒಬ್ಬ ಸೋಶಿಯಲ್ ಮೀಡಿಯಾದಲ್ಲಿ ಗೀಚುವರರನ್ನು ಇತಿಹಾಸ ನೆನಪಿಟ್ಟುಕೊಳ್ಳುವುದಿಲ್ಲ..

ಅವರ ಮಾತಿಗೆ ಬೆಲೆ ಕೋಡಬೇಕಾಗಿಲ್ಲ, ಅದರ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗುವುದಿಲ್ಲ

ಬೆಂಗಳೂರು: ಹರಕೆಯ ಕೋಲದಲ್ಲಿ ಭಾಗಿಯಾಗಿದ್ದ ಸ್ಪೀಕರ್ ಖಾದರ್ ವಿರುದ್ದ ಮುಸ್ಲಿಂ ಮುಖಂಡರೊಬ್ಬರು ಟೀಕಿಸಿದ್ದಕ್ಕೆ ಸ್ಪೀಕರ್ ಖಾದರ್ ತಿರುಗೇಟು ನೀಡಿದ್ದು, ಯಾರೋ ಒಂದಿಬ್ಬರು ಸೋಶಿಯಲ್ ಮೀಡಿಯಾದಲ್ಲಿ ಏನೋ ಗೀಚಿದ ಮಾತ್ರಕ್ಕೆ ನಮ್ಮ ಸಂಪ್ರದಾಯ ಬದಲಾಗಲ್ಲ. ನನ್ನ ಕೆಲಸವನ್ನು ನೂರಾರು ಮಂದಿ ಸ್ವೀಕಾರ ಮಾಡುತ್ತಾರೆ, ಗೌರವಿಸುತ್ತಾರೆ. ನಾವು ಮಾಡೋ ಕೆಲಸಗಳನ್ನು ಮಾತ್ರ ಇತಿಹಾಸ ನೆನಪಿಡುತ್ತದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ನಮ್ಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಅವರ ಇಚ್ಚೆಯಂತೆ ಹರಕೆ ಹೇಳಿಕೊಂಡಿದ್ದರು. ಅದಕ್ಕೆ ಹೋಗಿದ್ದೇನೆ, ಹರಕೆ, ಕೋಲವನ್ನು ಗೌರವಿಸುವುದು ನಮ್ಮ ಸಂಸ್ಕೃತಿ ಎಂದು ಸ್ಪೀಕರ್ ಯುಟಿ ಖಾದರ್ ಸ್ಪಷ್ಟನೆ ನೀಡಿದ್ದಾರೆ.

ಯಾರೋ ಒಬ್ಬ ಸೋಶಿಯಲ್ ಮೀಡಿಯಾದಲ್ಲಿ ಗೀಚುವರರನ್ನು ಇತಿಹಾಸ ನೆನಪಿಟ್ಟುಕೊಳ್ಳುವುದಿಲ್ಲ, ಯಾರು ಕೆಲಸ ಮಾಡುತ್ತಾರೋ ಅವರನ್ನು ಮಾತ್ರ ಇತಿಹಾಸ ನೆನಪಿಟ್ಟುಕೊಳ್ಳುತ್ತೆ. ಒಬ್ಬ ಹೇಳಿದ ಅಂತ ಎಲ್ಲರೂ ಹೇಳುವುದಿಲ್ಲ. ಅವರ ಮಾತಿಗೆ ಬೆಲೆ ಕೋಡಬೇಕಾಗಿಲ್ಲ ಎಂದರು. ಅದರ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗುವುದಿಲ್ಲ. ಎಲ್ಲ ಸಂಸ್ಕೃತಿಗೆ ಗೌರವ ಕೋಡಬೇಕು ಎಂದರು.

ಪಣೋಲಿಬೈಲಿನಲ್ಲಿ ಹರಕೆ ಕೋಲದಲ್ಲಿ ಭಾಗವಹಿಸಿದ ಯುಟಿ ಖಾದರ್ ಬಗ್ಗೆ ಫೇಸ್ಬುಕ್ ನಲ್ಲಿ ಸಾಲೆತ್ತೂರಿನ ಧರ್ಮಗುರು ಫೈಝಿ ಅಲ್ ಹಮ್ದಾನಿ ಎಂಬವರು ಟೀಕಿಸಿ ಬರೆದಿದ್ದರು. ಕೊರಗಜ್ಜನ ಭಕ್ತ ಯುಟಿ ಖಾದರ್ ಅವರನ್ನು ಮುಸ್ಲಿಮರು ಕೇವಲ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಖಂಡರಾಗಿ ಕಾಣುವುದು ಬೇಡ. ಉಲೆಮಾ, ಸಾತ್ವಿಕರು ತುಂಬಿದ ಧಾರ್ಮಿಕ ವೇದಿಕೆಗೆ ಮುಸ್ಲಿಂ ನಾಯಕನಾಗಿ ಹತ್ತಿಸುವುದು ತರವಲ್ಲ. ಅದು ಆತನ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾಗುತ್ತದೆ. ಖಾದರ್ ಕೊರಗಜ್ಜನಿಗೂ ಕಲ್ಲುರ್ಟಿ ಪಂಜುರ್ಲಿಗೂ ಆರಾಧಿಸಲಿ. ಪ್ರಸಾದ ಪಡೆದು ತಲೆಗೆ ಮೆತ್ತಿಕೊಂಡು ನರಕಕ್ಕೆ ಹೋಗಲಿ. ಅದು ಆತನ ವೈಯಕ್ತಿಕ ಸ್ವಾತಂತ್ರ್ಯ. ಅದನ್ನು ಭಾರತದಲ್ಲಿ ತಡೆಯುವ ಸ್ವಾತಂತ್ರ್ಯ ತನಗೆ ಇಲ್ಲ. ಆದರೆ ಆತನಿಗೆ ಉಲೆಮಾಗಳು ಗೌರವಿಸುವುದು ಕೆಟ್ಟ ಸಂದೇಶ ನೀಡುತ್ತದೆ ಎಂದು ಹೇಳಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

24 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago