ಶಿವಮೊಗ್ಗ : ವ್ಯಕ್ತಿ ಆತ್ಮಹತ್ಯೆಗೆ ಯಾರೇ ಕಾರಣವಾಗಿದ್ದರೂ ಪೊಲೀಸರು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುತ್ತಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಗೃಹ ಸಚಿವರು ಅರವಿಂದ ಲಿಂಬಾವಳಿ ಮತ್ತು ಇತರೇ ಆರು ಜನರ ಹೆಸರು ಬರೆದು ವ್ಯಕ್ತಿ ತನ್ನನ್ನು ತಾನು ಶೂಟ್ ಮಾಡಿಕೊಂಡಿದ್ದಾನೆ. ಈ ಬಗ್ಗೆ ಈಗಾಗಲೇ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್ ನವರು ಅಭಿಯಾನ ಮಾಡ್ತಾರೆ ಎಂದು ನಮ್ ಪೋಲಿಸರು ಯಾರನ್ನೂ ಉದ್ದೇಶ ಪೂರ್ವಕವಾಗಿ ಅರೆಸ್ಟ್ ಮಾಡುವುದಿಲ್ಲ, ಕಾನೂನು, ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಸರಿಸಿ ತಪ್ಪಿತಸ್ಥರಿಗೆ ಕ್ರಮವಾಗುತ್ತೆ, ಕಾಯ್ದೆ ಪ್ರಕಾರ ಅಪರಾಧಿಯಾದರೆ ಯಾರೇ ಆಗಲಿ ಅವರನ್ನು ಅರೆಸ್ಟ್ ಮಾಡುವ ಹಕ್ಕು ಪೊಲೀಸರಿಗಿದೆ ಎಂದು ಹೇಳಿದರು.
ಈಗಾಗಲೇ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಈ ಹಂತದಲ್ಲಿ ನಾನು ಮಾತನಾಡುವುದು ಸರಿಯಲ್ಲ ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ನಡೆಸಿ ಅಪರಾಧಿಗಳಿಗೆ ಶಿಕ್ಷೆ ನೀಡುತ್ತಾರೆ ಎಂದರು.
ಅರವಿಂದ ಲಿಂಬಾವಳಿ ಬಗ್ಗೆ ಎಫ್ ಐ ಆರ್ ನಲ್ಲಿ ಏನೇ ಇರಲಿ, ಅವರು ಶಾಸಕರಾಗಿರಲಿ, ಮಂತ್ರಿಯಾಗಲಿ, ಸಾಮಾನ್ಯ ವ್ಯಕ್ತಿಯಾಗಿರಲಿ. ಯಾರೋ ಬರೆದಿಟ್ಟಿದ್ದಾರೆ ಅಂತಾ ಏಕಾಏಕಿ ಅರೆಸ್ಟ್ ಮಾಡೋಕೆ ಆಗಲ್ಲ.. ಅದರ ಬಗ್ಗೆ ನಿಖರವಾಗಿ ತನಿಖೆ ನಡೆಯಬೇಕು ಆಮೇಲೆ ತಪ್ಪಿತಸ್ಥರಿಗೆ ಶಿಕ್ಷೆ ಎಂದರು.
ಔರಾದ್ಕರ್ ವರದಿ ಪ್ರಕಾರ ವ್ಯತ್ಯಾಸ ಇರೋದು ಸಹಜ. ಔರಾದ್ಕರ್ ವರದಿಯಿಂದ ಶೇ.೮೦ ಪೊಲೀಸ್ ಸಿಬ್ಬಂದಿಗೆ ಲಾಭ ಸಿಕ್ಕಿದೆ. ಅನ್ಯಾಯ ಆದವರಿಗೆ ಭತ್ಯೆಯಲ್ಲಿ ಸರಿಪಡಿಸುವ ಕೆಲಸ ಆಗ್ತಿದೆ ಎಂದು ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…