ಛತ್ತೀಸ್ಗಡ : “ನಾವು ಯಾರನ್ನೂ ಮತಾಂತರಗೊಳಿಸಬೇಕಾಗಿಲ್ಲ. ಆದರೆ, ಹೇಗೆ ಬದುಕಬೇಕು ಎನ್ನುವುದನ್ನು ಕಲಿಸುತ್ತೇವೆ” ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ.
ಛತ್ತೀಸ್ಗಡದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಭಾರತವನ್ನು ವಿಶ್ವಗುರುವನ್ನಾಗಿ ಮಾಡಲು ಎಲ್ಲರೂ ಒಗ್ಗಟ್ಟಾಗಿ ಮುನ್ನಡೆಯಬೇಕು. ನಾವು ಯಾರನ್ನೂ ಮತಾಂತರಗೊಳಿಸುವ ಅಗತ್ಯವಿಲ್ಲ. ಇಡೀ ಜಗತ್ತಿಗೆ ಈ ಪಾಠವನ್ನು ಭಾರತ ಕಲಿಸಿದೆ. ಎಲ್ಲರಿಗೂ ಸಹ ನಮ್ಮ ಪಂಥ ಒಳ್ಳೆಯದನ್ನೇ ಮಾಡುತ್ತದೆ. ಯಾರ ಧರ್ಮವನ್ನೂ ನಾವು ಬದಲಾಯಿಸಲು ಒತ್ತಾಯಿಸುವುದಿಲ್ಲ” ಎಂದಿದ್ದಾರೆ.
“1930ರಿಂದ ದೇಶದಲ್ಲಿ ಮುಸ್ಲಿಂ ಜನಶಕ್ತಿಯನ್ನು ಹೆಚ್ಚಿಸು ಯತ್ನ ನಡೆಯುತ್ತಿದೆ. ಭಾರತವನ್ನು ಮತ್ತೊಂದು ಪಾಕಿಸ್ತಾನವನ್ನಾಗಿ ಮಾಡುವ ಉದ್ದೇಶದಿಂದ ಮುಸ್ಲಿಮರ ಪ್ರಾಬಲ್ಯವನ್ನು ಹೆಚ್ಚಿಸಲು ಸಾಕಷ್ಟು ಯತ್ನಗಳು ನಡೆಯುತ್ತಿದೆ. 1930ರಿಂದಲೇ ಅಸ್ಸಾಂ ಸೇರಿದಂತೆ ಪಂಜಾಬ್, ಸಿಂಧ್ ಹಾಗೂ ಪಶ್ಚಿಮ ಬಂಗಾಳದಲ್ಲಿ ಈ ರೀತಿಯಾದ ಯತ್ನಗಳು ನಡೆಯುತ್ತಿದೆ. ಅಲ್ಲದೇ, ಇದು ನಿರ್ದಿಷ್ಟ ಮಟ್ಟದಲ್ಲಿ ಯಶಸ್ವಿ ಆಗಿದೆ” ಎಂದು ಆರೋಪಿಸಿದ್ದರು.
“ಎಲ್ಲಾ ಭಾರತ ವಾಸಿಗಳ ಡಿಎನ್ಎ ಒಂದೇ ಆಗಿದೆ. ಹಾಗಾಗಿ ಅವರು ಯಾವ ಧರ್ಮವನ್ನು ಆರಾಧಿಸುತ್ತಾರೆ ಎನ್ನುವುದರ ಮೇಲೆ ಅವರನ್ನು ಬೇರೆ ಮಾಡಲು ಆಗುವುದಿಲ್ಲ. ಹಾಗಾಗಿ ಮುಸ್ಲಿಮರು ಭಾರತದಲ್ಲಿ ಇಸ್ಲಾಂ ಧರ್ಮ ಅಪಾಯದಲ್ಲಿದೆ ಎನ್ನುವ ತಪ್ಪು ತಿಳುವಳಿಕೆಯನ್ನು ಬಿಡಿ” ಎಂದಿದ್ದರು.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…