Featured

ಯಾರ ಧರ್ಮವನ್ನೂ ನಾವು ಬದಲಾಯಿಸಲು ಒತ್ತಾಯಿಸುವುದಿಲ್ಲ : ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌‌ – VIshwanews24

ಯಾರ ಧರ್ಮವನ್ನೂ ನಾವು ಬದಲಾಯಿಸಲು ಒತ್ತಾಯಿಸುವುದಿಲ್ಲ : ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌‌ – VIshwanews24

ಛತ್ತೀಸ್‌ಗಡ : “ನಾವು ಯಾರನ್ನೂ ಮತಾಂತರಗೊಳಿಸಬೇಕಾಗಿಲ್ಲ. ಆದರೆ, ಹೇಗೆ ಬದುಕಬೇಕು ಎನ್ನುವುದನ್ನು ಕಲಿಸುತ್ತೇವೆ” ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌‌ ತಿಳಿಸಿದ್ದಾರೆ.

ಛತ್ತೀಸ್‌ಗಡದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಭಾರತವನ್ನು ವಿಶ್ವಗುರುವನ್ನಾಗಿ ಮಾಡಲು ಎಲ್ಲರೂ ಒಗ್ಗಟ್ಟಾಗಿ ಮುನ್ನಡೆಯಬೇಕು. ನಾವು ಯಾರನ್ನೂ ಮತಾಂತರಗೊಳಿಸುವ ಅಗತ್ಯವಿಲ್ಲ. ಇಡೀ ಜಗತ್ತಿಗೆ ಈ ಪಾಠವನ್ನು ಭಾರತ ಕಲಿಸಿದೆ. ಎಲ್ಲರಿಗೂ ಸಹ ನಮ್ಮ ಪಂಥ ಒಳ್ಳೆಯದನ್ನೇ ಮಾಡುತ್ತದೆ. ಯಾರ ಧರ್ಮವನ್ನೂ ನಾವು ಬದಲಾಯಿಸಲು ಒತ್ತಾಯಿಸುವುದಿಲ್ಲ” ಎಂದಿದ್ದಾರೆ.

“1930ರಿಂದ ದೇಶದಲ್ಲಿ ಮುಸ್ಲಿಂ ಜನಶಕ್ತಿಯನ್ನು ಹೆಚ್ಚಿಸು ಯತ್ನ ನಡೆಯುತ್ತಿದೆ. ಭಾರತವನ್ನು ಮತ್ತೊಂದು ಪಾಕಿಸ್ತಾನವನ್ನಾಗಿ ಮಾಡುವ ಉದ್ದೇಶದಿಂದ ಮುಸ್ಲಿಮರ ಪ್ರಾಬಲ್ಯವನ್ನು ಹೆಚ್ಚಿಸಲು ಸಾಕಷ್ಟು ಯತ್ನಗಳು ನಡೆಯುತ್ತಿದೆ. 1930ರಿಂದಲೇ ಅಸ್ಸಾಂ ಸೇರಿದಂತೆ ಪಂಜಾಬ್‌‌, ಸಿಂಧ್‌ ಹಾಗೂ ಪಶ್ಚಿಮ ಬಂಗಾಳದಲ್ಲಿ ಈ ರೀತಿಯಾದ ಯತ್ನಗಳು ನಡೆಯುತ್ತಿದೆ. ಅಲ್ಲದೇ, ಇದು ನಿರ್ದಿಷ್ಟ ಮಟ್ಟದಲ್ಲಿ ಯಶಸ್ವಿ ಆಗಿದೆ” ಎಂದು ಆರೋಪಿಸಿದ್ದರು.

“ಎಲ್ಲಾ ಭಾರತ ವಾಸಿಗಳ ಡಿಎನ್‌ಎ ಒಂದೇ ಆಗಿದೆ. ಹಾಗಾಗಿ ಅವರು ಯಾವ ಧರ್ಮವನ್ನು ಆರಾಧಿಸುತ್ತಾರೆ ಎನ್ನುವುದರ ಮೇಲೆ ಅವರನ್ನು ಬೇರೆ ಮಾಡಲು ಆಗುವುದಿಲ್ಲ. ಹಾಗಾಗಿ ಮುಸ್ಲಿಮರು ಭಾರತದಲ್ಲಿ ಇಸ್ಲಾಂ ಧರ್ಮ ಅಪಾಯದಲ್ಲಿದೆ ಎನ್ನುವ ತಪ್ಪು ತಿಳುವಳಿಕೆಯನ್ನು ಬಿಡಿ” ಎಂದಿದ್ದರು.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

14 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

19 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

22 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

22 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

22 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

22 hours ago