Featured

ಯಾರ ಧರ್ಮವನ್ನೂ ನಾವು ಬದಲಾಯಿಸಲು ಒತ್ತಾಯಿಸುವುದಿಲ್ಲ : ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌‌ – VIshwanews24

ಯಾರ ಧರ್ಮವನ್ನೂ ನಾವು ಬದಲಾಯಿಸಲು ಒತ್ತಾಯಿಸುವುದಿಲ್ಲ : ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌‌ – VIshwanews24

ಛತ್ತೀಸ್‌ಗಡ : “ನಾವು ಯಾರನ್ನೂ ಮತಾಂತರಗೊಳಿಸಬೇಕಾಗಿಲ್ಲ. ಆದರೆ, ಹೇಗೆ ಬದುಕಬೇಕು ಎನ್ನುವುದನ್ನು ಕಲಿಸುತ್ತೇವೆ” ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌‌ ತಿಳಿಸಿದ್ದಾರೆ.

ಛತ್ತೀಸ್‌ಗಡದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಭಾರತವನ್ನು ವಿಶ್ವಗುರುವನ್ನಾಗಿ ಮಾಡಲು ಎಲ್ಲರೂ ಒಗ್ಗಟ್ಟಾಗಿ ಮುನ್ನಡೆಯಬೇಕು. ನಾವು ಯಾರನ್ನೂ ಮತಾಂತರಗೊಳಿಸುವ ಅಗತ್ಯವಿಲ್ಲ. ಇಡೀ ಜಗತ್ತಿಗೆ ಈ ಪಾಠವನ್ನು ಭಾರತ ಕಲಿಸಿದೆ. ಎಲ್ಲರಿಗೂ ಸಹ ನಮ್ಮ ಪಂಥ ಒಳ್ಳೆಯದನ್ನೇ ಮಾಡುತ್ತದೆ. ಯಾರ ಧರ್ಮವನ್ನೂ ನಾವು ಬದಲಾಯಿಸಲು ಒತ್ತಾಯಿಸುವುದಿಲ್ಲ” ಎಂದಿದ್ದಾರೆ.

“1930ರಿಂದ ದೇಶದಲ್ಲಿ ಮುಸ್ಲಿಂ ಜನಶಕ್ತಿಯನ್ನು ಹೆಚ್ಚಿಸು ಯತ್ನ ನಡೆಯುತ್ತಿದೆ. ಭಾರತವನ್ನು ಮತ್ತೊಂದು ಪಾಕಿಸ್ತಾನವನ್ನಾಗಿ ಮಾಡುವ ಉದ್ದೇಶದಿಂದ ಮುಸ್ಲಿಮರ ಪ್ರಾಬಲ್ಯವನ್ನು ಹೆಚ್ಚಿಸಲು ಸಾಕಷ್ಟು ಯತ್ನಗಳು ನಡೆಯುತ್ತಿದೆ. 1930ರಿಂದಲೇ ಅಸ್ಸಾಂ ಸೇರಿದಂತೆ ಪಂಜಾಬ್‌‌, ಸಿಂಧ್‌ ಹಾಗೂ ಪಶ್ಚಿಮ ಬಂಗಾಳದಲ್ಲಿ ಈ ರೀತಿಯಾದ ಯತ್ನಗಳು ನಡೆಯುತ್ತಿದೆ. ಅಲ್ಲದೇ, ಇದು ನಿರ್ದಿಷ್ಟ ಮಟ್ಟದಲ್ಲಿ ಯಶಸ್ವಿ ಆಗಿದೆ” ಎಂದು ಆರೋಪಿಸಿದ್ದರು.

“ಎಲ್ಲಾ ಭಾರತ ವಾಸಿಗಳ ಡಿಎನ್‌ಎ ಒಂದೇ ಆಗಿದೆ. ಹಾಗಾಗಿ ಅವರು ಯಾವ ಧರ್ಮವನ್ನು ಆರಾಧಿಸುತ್ತಾರೆ ಎನ್ನುವುದರ ಮೇಲೆ ಅವರನ್ನು ಬೇರೆ ಮಾಡಲು ಆಗುವುದಿಲ್ಲ. ಹಾಗಾಗಿ ಮುಸ್ಲಿಮರು ಭಾರತದಲ್ಲಿ ಇಸ್ಲಾಂ ಧರ್ಮ ಅಪಾಯದಲ್ಲಿದೆ ಎನ್ನುವ ತಪ್ಪು ತಿಳುವಳಿಕೆಯನ್ನು ಬಿಡಿ” ಎಂದಿದ್ದರು.

Vishwa News 24

Recent Posts

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

4 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

4 hours ago

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

6 hours ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

7 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

8 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

8 hours ago