ಪುಣೆ :ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾವಾಗ ರಾಜಕೀಯ ತೊರೆಯಬೇಕು ಎಂದು ನಿರ್ಧರಿಸುತ್ತಾರೋ ಅಂದೇ ನಾನು ಕೂಡ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದಲ್ಲಿ ಪ್ರಧಾನ ಸೇವಕ ಮೋದಿ ಅವರ ಕಾರ್ಯ ಕುರಿತು ವಿವರಿಸುವಂತೆ ಸಾರ್ವಜನಿಕರು ಒಬ್ಬರು ಪ್ರಶ್ನೆಗೆ ಉತ್ತರಿಸಿದ ಅವರು, ಯಾವಾಗಲೂ ನಾನು ವರ್ಚಸ್ವಿ ನಾಯಕನೊಂದಿಗೆ ಕೆಲಸ ಮಾಡಬೇಕು ಎಂದು ನಾನು ರಾಜಕೀಯಕ್ಕೆ ಬಂದೆ. ದಿವಂಗತ ಅಟಲ್ ಬಿಹಾರಿ ವಾಜಪೇಯಿಯಂತಹ ನಾಯಕರ ಕೆಳಗೆ ಕೆಲಸ ಮಾಡುವ ಅದೃಷ್ಟ ನನಗೆ ಒಲಿಯಿತು. ಪ್ರಸ್ತುತ ನಾನು ಮೋದಿ ಅವರ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದರು.ಯಾವಾಗ ರಾಜಕೀಯದಿಂದ ಮೋದಿ ಹಿಂದೆ ಸರಿಯುತ್ತಾರೋ ಅಂದೇ ನಾನು ಕೂಡ ನನ್ನ ರಾಜಕೀಯ ಜೀವನಕ್ಕೆ ತೆರೆ ಎಳೆಯುತ್ತೇನೆ ಎಂದರು.
ಸ್ವಾತಂತ್ರ್ಯ ದೇಶದಲ್ಲಿ ನನ್ನ ದೇಶಕ್ಕಾಗಿ ಎಷ್ಟು ಜೀವನವನ್ನು ನೀಡಬೇಕು ಎಂದು ನಾನು ನಿರ್ಧರಿಸಿದ್ದೇನೆ. ಒಂದು ವೇಳೆ ನಾನು ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗದಿದ್ದರೆ, ಆ ಸ್ವಾತಂತ್ರ್ಯದ ಅರ್ಥವೇನು ಎಂದು ಪ್ರಶ್ನಿಸಿದರು.
ಮೋದಿ ಹೊರತಾಗಿ ಬೇರೆ ನಾಯಕನೊಂದಿಗೆ ಕೆಲಸ ಮಾಡಲು ಇಚ್ಛಿಸಿದ್ಧೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಜೊತೆ ನಾನು ಸದ್ಯ ಕೆಲಸ ಮಾಡುತ್ತಿಲ್ಲ. ನನ್ನ 18 ವರ್ಷದ ರಾಜಕೀಯ ಜೀವನದಲ್ಲಿ ಸಂಘಟನೆಯಲ್ಲಿ ಅನೇಕ ನಾಯಕರೊಂದಿಗೆ ನಾನು ಕಾರ್ಯ ನಿರ್ವಹಿಸಿದ್ದೇನೆ. ವಾಜಪೇಯಿ ಹಾಗೂ ಎಲ್ಕೆ ಅಡ್ವಾನಿ ಅವರಂತ ನಾಯಕರ ಜೊತೆ ಕೂಡ ಕೆಲಸ ಮಾಡುವ ಅವಕಾಶ ನನ್ನದಾಗಿತು ಎಂದರು.
ಮೋದಿ ದೀರ್ಘಕಾಲದವರೆಗೆ ರಾಜಕೀಯದಲ್ಲಿ ಇರುವುದಿಲ್ಲ ಎಂದು ನೀವು ಭಾವಿಸುತ್ತೀರಾ. ಆದರೆ, ಅವರು ಇನ್ನು ಅನೇಕ ವರ್ಷಗಳ ಕಾಲ ಇರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…