ಪುಣೆ :ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾವಾಗ ರಾಜಕೀಯ ತೊರೆಯಬೇಕು ಎಂದು ನಿರ್ಧರಿಸುತ್ತಾರೋ ಅಂದೇ ನಾನು ಕೂಡ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದಲ್ಲಿ ಪ್ರಧಾನ ಸೇವಕ ಮೋದಿ ಅವರ ಕಾರ್ಯ ಕುರಿತು ವಿವರಿಸುವಂತೆ ಸಾರ್ವಜನಿಕರು ಒಬ್ಬರು ಪ್ರಶ್ನೆಗೆ ಉತ್ತರಿಸಿದ ಅವರು, ಯಾವಾಗಲೂ ನಾನು ವರ್ಚಸ್ವಿ ನಾಯಕನೊಂದಿಗೆ ಕೆಲಸ ಮಾಡಬೇಕು ಎಂದು ನಾನು ರಾಜಕೀಯಕ್ಕೆ ಬಂದೆ. ದಿವಂಗತ ಅಟಲ್ ಬಿಹಾರಿ ವಾಜಪೇಯಿಯಂತಹ ನಾಯಕರ ಕೆಳಗೆ ಕೆಲಸ ಮಾಡುವ ಅದೃಷ್ಟ ನನಗೆ ಒಲಿಯಿತು. ಪ್ರಸ್ತುತ ನಾನು ಮೋದಿ ಅವರ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದರು.ಯಾವಾಗ ರಾಜಕೀಯದಿಂದ ಮೋದಿ ಹಿಂದೆ ಸರಿಯುತ್ತಾರೋ ಅಂದೇ ನಾನು ಕೂಡ ನನ್ನ ರಾಜಕೀಯ ಜೀವನಕ್ಕೆ ತೆರೆ ಎಳೆಯುತ್ತೇನೆ ಎಂದರು.
ಸ್ವಾತಂತ್ರ್ಯ ದೇಶದಲ್ಲಿ ನನ್ನ ದೇಶಕ್ಕಾಗಿ ಎಷ್ಟು ಜೀವನವನ್ನು ನೀಡಬೇಕು ಎಂದು ನಾನು ನಿರ್ಧರಿಸಿದ್ದೇನೆ. ಒಂದು ವೇಳೆ ನಾನು ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗದಿದ್ದರೆ, ಆ ಸ್ವಾತಂತ್ರ್ಯದ ಅರ್ಥವೇನು ಎಂದು ಪ್ರಶ್ನಿಸಿದರು.
ಮೋದಿ ಹೊರತಾಗಿ ಬೇರೆ ನಾಯಕನೊಂದಿಗೆ ಕೆಲಸ ಮಾಡಲು ಇಚ್ಛಿಸಿದ್ಧೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಜೊತೆ ನಾನು ಸದ್ಯ ಕೆಲಸ ಮಾಡುತ್ತಿಲ್ಲ. ನನ್ನ 18 ವರ್ಷದ ರಾಜಕೀಯ ಜೀವನದಲ್ಲಿ ಸಂಘಟನೆಯಲ್ಲಿ ಅನೇಕ ನಾಯಕರೊಂದಿಗೆ ನಾನು ಕಾರ್ಯ ನಿರ್ವಹಿಸಿದ್ದೇನೆ. ವಾಜಪೇಯಿ ಹಾಗೂ ಎಲ್ಕೆ ಅಡ್ವಾನಿ ಅವರಂತ ನಾಯಕರ ಜೊತೆ ಕೂಡ ಕೆಲಸ ಮಾಡುವ ಅವಕಾಶ ನನ್ನದಾಗಿತು ಎಂದರು.
ಮೋದಿ ದೀರ್ಘಕಾಲದವರೆಗೆ ರಾಜಕೀಯದಲ್ಲಿ ಇರುವುದಿಲ್ಲ ಎಂದು ನೀವು ಭಾವಿಸುತ್ತೀರಾ. ಆದರೆ, ಅವರು ಇನ್ನು ಅನೇಕ ವರ್ಷಗಳ ಕಾಲ ಇರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…