ಪುಣೆ :ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾವಾಗ ರಾಜಕೀಯ ತೊರೆಯಬೇಕು ಎಂದು ನಿರ್ಧರಿಸುತ್ತಾರೋ ಅಂದೇ ನಾನು ಕೂಡ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದಲ್ಲಿ ಪ್ರಧಾನ ಸೇವಕ ಮೋದಿ ಅವರ ಕಾರ್ಯ ಕುರಿತು ವಿವರಿಸುವಂತೆ ಸಾರ್ವಜನಿಕರು ಒಬ್ಬರು ಪ್ರಶ್ನೆಗೆ ಉತ್ತರಿಸಿದ ಅವರು, ಯಾವಾಗಲೂ ನಾನು ವರ್ಚಸ್ವಿ ನಾಯಕನೊಂದಿಗೆ ಕೆಲಸ ಮಾಡಬೇಕು ಎಂದು ನಾನು ರಾಜಕೀಯಕ್ಕೆ ಬಂದೆ. ದಿವಂಗತ ಅಟಲ್ ಬಿಹಾರಿ ವಾಜಪೇಯಿಯಂತಹ ನಾಯಕರ ಕೆಳಗೆ ಕೆಲಸ ಮಾಡುವ ಅದೃಷ್ಟ ನನಗೆ ಒಲಿಯಿತು. ಪ್ರಸ್ತುತ ನಾನು ಮೋದಿ ಅವರ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದರು.ಯಾವಾಗ ರಾಜಕೀಯದಿಂದ ಮೋದಿ ಹಿಂದೆ ಸರಿಯುತ್ತಾರೋ ಅಂದೇ ನಾನು ಕೂಡ ನನ್ನ ರಾಜಕೀಯ ಜೀವನಕ್ಕೆ ತೆರೆ ಎಳೆಯುತ್ತೇನೆ ಎಂದರು.
ಸ್ವಾತಂತ್ರ್ಯ ದೇಶದಲ್ಲಿ ನನ್ನ ದೇಶಕ್ಕಾಗಿ ಎಷ್ಟು ಜೀವನವನ್ನು ನೀಡಬೇಕು ಎಂದು ನಾನು ನಿರ್ಧರಿಸಿದ್ದೇನೆ. ಒಂದು ವೇಳೆ ನಾನು ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗದಿದ್ದರೆ, ಆ ಸ್ವಾತಂತ್ರ್ಯದ ಅರ್ಥವೇನು ಎಂದು ಪ್ರಶ್ನಿಸಿದರು.
ಮೋದಿ ಹೊರತಾಗಿ ಬೇರೆ ನಾಯಕನೊಂದಿಗೆ ಕೆಲಸ ಮಾಡಲು ಇಚ್ಛಿಸಿದ್ಧೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಜೊತೆ ನಾನು ಸದ್ಯ ಕೆಲಸ ಮಾಡುತ್ತಿಲ್ಲ. ನನ್ನ 18 ವರ್ಷದ ರಾಜಕೀಯ ಜೀವನದಲ್ಲಿ ಸಂಘಟನೆಯಲ್ಲಿ ಅನೇಕ ನಾಯಕರೊಂದಿಗೆ ನಾನು ಕಾರ್ಯ ನಿರ್ವಹಿಸಿದ್ದೇನೆ. ವಾಜಪೇಯಿ ಹಾಗೂ ಎಲ್ಕೆ ಅಡ್ವಾನಿ ಅವರಂತ ನಾಯಕರ ಜೊತೆ ಕೂಡ ಕೆಲಸ ಮಾಡುವ ಅವಕಾಶ ನನ್ನದಾಗಿತು ಎಂದರು.
ಮೋದಿ ದೀರ್ಘಕಾಲದವರೆಗೆ ರಾಜಕೀಯದಲ್ಲಿ ಇರುವುದಿಲ್ಲ ಎಂದು ನೀವು ಭಾವಿಸುತ್ತೀರಾ. ಆದರೆ, ಅವರು ಇನ್ನು ಅನೇಕ ವರ್ಷಗಳ ಕಾಲ ಇರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…