ಉಡುಪಿ: ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಬಾರದೆ, ಮೀನುಗಳ ಸಮೃದ್ಧಿ ನೆಲೆಸಿ ಮೀನುಗಾರಿಕೆಗೆ ತೆರಳಿದಾಗ ಯಾವುದೇ ಅಡ್ಡಿ ಆತಂಕಗಳು ಮೀನುಗಾರರಿಗೆ ಎದುರಾಗದಿರಲಿ ಎಂದು ಪ್ರಾರ್ಥಿಸಿ ಗಂಗೊಳ್ಳಿಯಲ್ಲಿ ಮೀನುಗಾರರು ಸಮುದ್ರಪೂಜೆ ನೆರವೇರಿಸಿದರು.
ಗಂಗೊಳ್ಳಿಯ ಅರ್ಚಕ ವೇದಮೂರ್ತಿ ವಿಠಲ್ದಾಸ್ ಭಟ್ ನೇತೃತ್ವದಲ್ಲಿ ಸಮುದ್ರ ಪೂಜೆಯ ಧಾರ್ಮಿಕ ವಿಧಿಗಳು ನೆರವೇರಿದವು. ಪರ್ಸಿನ್ ಬೋಟ್, ತ್ರಿಸೆವೆಂಟಿ ಬೋಟ್ ಹಾಗೂ ಟ್ರಾಲರ್ ಬೋಟ್ಗಳ ಸಂಘದ ಸದಸ್ಯರು ಸಮುದ್ರ ರಾಜನಿಗೆ ಹಾಲು, ಸೀಯಾಳ, ಫಲಪುಷ್ಪವನ್ನು ಅರ್ಪಿಸಿದರು.
ಕಡಲಿನಲ್ಲಿ ತುಪಾನ್(ಗಾಳಿಯೊತ್ತಡ) ಹೆಚ್ಚಿದೆ. ಹೀಗಾಗಿ ಎರಡು ತಿಂಗಳ ಮೀನುಗಾರಿಕಾ ನಿರ್ಬಂಧ ಜು.31ಕ್ಕೆ ಮುಗಿದಿದ್ದರೂ ಕೂಡ ಕಡಲಿಗಿಳಿಯಲು ಅಸಾಧ್ಯವಾಗಿದೆ. ಗಂಗೊಳ್ಳಿಯಲ್ಲಿ ದಡದಲ್ಲಿದ್ದ ಬೋಟ್ಗಳನ್ನು ನೀರಿಗೆ ಇಳಿಸುವ ಕಾರ್ಯ, ಬಲೆ ಹೆಣೆಯುವ, ಇನ್ನಿತರ ಪರಿಕರಗಳನ್ನು ಒಟ್ಟುಗೂಡಿಸುವ, ಬೋಟ್ಗಳಿಗೆ ಬಣ್ಣ ಬಳಿಯುವ ಕಾರ್ಯ ಭರದಿಂದ ನಡೆಯುತ್ತಿದೆ.
ಗಂಗೊಳ್ಳಿಯಲ್ಲಿ ಆ.16ರ ನಂತರ ಕಡಲಿಗೆ ಇಳಿಯಲು ಸಿದ್ಧತೆ ಮಾಡಿಕೊಂಡಿದೆ ಎಂದು ಪರ್ಸಿನ್ ಬೋಟ್ಗಳ ಮೀನುಗಾರರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಮಡಿವಾಳ ತಿಳಿಸಿದ್ದಾರೆ.
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…
ಉಡುಪಿ: ಸುರಕ್ಷತಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ 23 ಬಸ್ಗಳ ವಿರುದ್ಧ ಪ್ರಕರಣ ದಾಖಲು ಉಡುಪಿ: ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿ (ಆರ್ಟಿಒ)…
ಮಂಗಳೂರು: ಕಾಲೇಜು ಹಾಸ್ಟೆಲ್ ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳ ಬಂಧನ ಮಂಗಳೂರು: ನಗರದ ಸಮೀಪದ ಖಾಸಗಿ ಕಾಲೇಜೊಂದರ ಹಾಸ್ಟೆಲ್ಗೆ…
ಉದ್ಯಾವರ :ಚರಂಡಿಗೆ ಬಿದ್ದ ಸಕ್ಕರೆ ಸಾಗಣೆ ಲಾರಿ; ಮದ್ಯದ ಅಮಲಿನಲ್ಲಿದ್ದ ಚಾಲಕ ವಶಕ್ಕೆ ಉಡುಪಿ: ರಾಷ್ಟ್ರೀಯ ಹೆದ್ದಾರಿ–66ರ ಉದ್ಯಾವರ ಸಮೀಪ…
ಹೆಜಮಾಡಿ–ಪಡುಬಿದ್ರಿ ಟೋಲ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಸಚಿವರಿಗೆ ನಿಯೋಗದಿಂದ ಮನವಿ ಬೆಂಗಳೂರು: ಪಡುಬಿದ್ರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ…
ಮೂಡಬಿದ್ರೆ: ಯುವತಿ ನಾಪತ್ತೆ ; ಪತ್ತೆಗೆ ಮನವಿ ಮೂಡಬಿದ್ರೆ: ಸಾಬಿರಾ ಬಾನು (20) ಎಂಬವರು ಜುಲೈ 27 ರಂದು ಕಾಣೆಯಾಗಿದ್ದು,…