ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ದ್ವೇಷ ರಾಜಕಾರಣ ಮಾಡುವುದಿಲ್ಲ. ಈ ಬಗ್ಗೆ ನಾಡಿನ ಜನರಿಗೆ, ಪ್ರತಿಪಕ್ಷಗಳಿಗೆ ಭರವಸೆ ಕೊಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮುಖ್ಯ ಕಾರ್ಯದರ್ಶಿಯೊಂದಿಗೆ ಸಂಪುಟ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಯಾರೇ ದ್ವೇಷದ ರಾಜಕಾರಣ ಮಾಡಿದ್ದರೂ ನಾನು ಅದೆಲ್ಲವನ್ನು ಮರೆತು, ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತೇನೆ. ಅಭಿವೃದ್ಧಿಯೆಡೆಗೆ ಮಾತ್ರ ನನ್ನ ಗಮನ. ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ. ಅದನ್ನು ಸರಿದಾರಿಗೆ ತರುವ ಮೂಲಕ ಹಿಂದಿನ 14 ತಿಂಗಳ ಸರ್ಕಾರಕ್ಕೂ ನಮ್ಮ ಸರ್ಕಾರಕ್ಕೂ ಏನು ವ್ಯತ್ಯಾಸ ಎಂಬುದನ್ನು ನಾಲ್ಕೈದು ತಿಂಗಳಲ್ಲಿ ಮಾಡಿ ತೋರಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡು ತ್ತೇವೆ ಎಂದರು.
ಬರಗಾಲದಿಂದ ರೈತರು ಸಂಕಷ್ಟಕ್ಕೆ ಈಡಾಗಿದ್ದಾರೆ. ರಾಜ್ಯದ ರೈತರಿಗೆ ನನ್ನ ಮೊದಲ ಆದ್ಯತೆ. ನೇಕಾರರು, ಮೀನುಗಾರರು, ಕೃಷಿ ಕಾರ್ವಿುಕರ ಸಂಕಷ್ಟಕ್ಕೆ ಸ್ಪಂದಿಸಲು ವಿಶೇಷ ಗಮನ ಕೊಡುತ್ತೇನೆ ಎಂದು ಹೇಳಿದರು.
“ಜುಲೈ 29ರಂದು ವಿಧಾನ ಮಂಡಲ ಅಧಿವೇಶನ ಕರೆಯಲು ತೀರ್ಮಾನ ಮಾಡಿದ್ದೇವೆ. ಅಂದು ಬೆಳಗ್ಗೆ 10 ಗಂಟೆಗೆ ಅಧಿವೇಶನ ಆರಂಭವಾಗಲಿದೆ. ಅಂದು ವಿಶ್ವಾಸಮತ ಸಾಬೀತು ಮಾಡುತ್ತೇವೆ” ಎಂದು ತಿಳಿಸಿದರು. ಜುಲೈ 29ರಂದು ಸೋಮವಾರ ವಿಧಾನ ಮಂಡಲದ ಕಲಾಪ ನಡೆಸುತ್ತೇವೆ. ರೈತರ ಸಾಲಮನ್ನಾ ಬಗ್ಗೆ ಮಾಹಿತಿ ಪಡೆದು ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇನೆ” ಎಂದು ಸ್ಪಷ್ಟಪಡಿಸಿದರು
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಬಡರೈತರಿಗೆ ಆರು ಸಾವಿರ ರೂ.ಗಳನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತಿದೆ. ಇದರ ಜತೆಗೆ ರಾಜ್ಯ ಸರ್ಕಾರದಿಂದ ಎರಡು ಕಂತುಗಳಲ್ಲಿ 4 ಸಾವಿರ ನೀಡಲು ತೀರ್ವನಿಸಲಾಗಿದೆ ಎಂದು ಹೇಳಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…