ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ದ್ವೇಷ ರಾಜಕಾರಣ ಮಾಡುವುದಿಲ್ಲ. ಈ ಬಗ್ಗೆ ನಾಡಿನ ಜನರಿಗೆ, ಪ್ರತಿಪಕ್ಷಗಳಿಗೆ ಭರವಸೆ ಕೊಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮುಖ್ಯ ಕಾರ್ಯದರ್ಶಿಯೊಂದಿಗೆ ಸಂಪುಟ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಯಾರೇ ದ್ವೇಷದ ರಾಜಕಾರಣ ಮಾಡಿದ್ದರೂ ನಾನು ಅದೆಲ್ಲವನ್ನು ಮರೆತು, ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತೇನೆ. ಅಭಿವೃದ್ಧಿಯೆಡೆಗೆ ಮಾತ್ರ ನನ್ನ ಗಮನ. ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ. ಅದನ್ನು ಸರಿದಾರಿಗೆ ತರುವ ಮೂಲಕ ಹಿಂದಿನ 14 ತಿಂಗಳ ಸರ್ಕಾರಕ್ಕೂ ನಮ್ಮ ಸರ್ಕಾರಕ್ಕೂ ಏನು ವ್ಯತ್ಯಾಸ ಎಂಬುದನ್ನು ನಾಲ್ಕೈದು ತಿಂಗಳಲ್ಲಿ ಮಾಡಿ ತೋರಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡು ತ್ತೇವೆ ಎಂದರು.
ಬರಗಾಲದಿಂದ ರೈತರು ಸಂಕಷ್ಟಕ್ಕೆ ಈಡಾಗಿದ್ದಾರೆ. ರಾಜ್ಯದ ರೈತರಿಗೆ ನನ್ನ ಮೊದಲ ಆದ್ಯತೆ. ನೇಕಾರರು, ಮೀನುಗಾರರು, ಕೃಷಿ ಕಾರ್ವಿುಕರ ಸಂಕಷ್ಟಕ್ಕೆ ಸ್ಪಂದಿಸಲು ವಿಶೇಷ ಗಮನ ಕೊಡುತ್ತೇನೆ ಎಂದು ಹೇಳಿದರು.
“ಜುಲೈ 29ರಂದು ವಿಧಾನ ಮಂಡಲ ಅಧಿವೇಶನ ಕರೆಯಲು ತೀರ್ಮಾನ ಮಾಡಿದ್ದೇವೆ. ಅಂದು ಬೆಳಗ್ಗೆ 10 ಗಂಟೆಗೆ ಅಧಿವೇಶನ ಆರಂಭವಾಗಲಿದೆ. ಅಂದು ವಿಶ್ವಾಸಮತ ಸಾಬೀತು ಮಾಡುತ್ತೇವೆ” ಎಂದು ತಿಳಿಸಿದರು. ಜುಲೈ 29ರಂದು ಸೋಮವಾರ ವಿಧಾನ ಮಂಡಲದ ಕಲಾಪ ನಡೆಸುತ್ತೇವೆ. ರೈತರ ಸಾಲಮನ್ನಾ ಬಗ್ಗೆ ಮಾಹಿತಿ ಪಡೆದು ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇನೆ” ಎಂದು ಸ್ಪಷ್ಟಪಡಿಸಿದರು
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಬಡರೈತರಿಗೆ ಆರು ಸಾವಿರ ರೂ.ಗಳನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತಿದೆ. ಇದರ ಜತೆಗೆ ರಾಜ್ಯ ಸರ್ಕಾರದಿಂದ ಎರಡು ಕಂತುಗಳಲ್ಲಿ 4 ಸಾವಿರ ನೀಡಲು ತೀರ್ವನಿಸಲಾಗಿದೆ ಎಂದು ಹೇಳಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…