ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ದ್ವೇಷ ರಾಜಕಾರಣ ಮಾಡುವುದಿಲ್ಲ. ಈ ಬಗ್ಗೆ ನಾಡಿನ ಜನರಿಗೆ, ಪ್ರತಿಪಕ್ಷಗಳಿಗೆ ಭರವಸೆ ಕೊಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮುಖ್ಯ ಕಾರ್ಯದರ್ಶಿಯೊಂದಿಗೆ ಸಂಪುಟ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಯಾರೇ ದ್ವೇಷದ ರಾಜಕಾರಣ ಮಾಡಿದ್ದರೂ ನಾನು ಅದೆಲ್ಲವನ್ನು ಮರೆತು, ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತೇನೆ. ಅಭಿವೃದ್ಧಿಯೆಡೆಗೆ ಮಾತ್ರ ನನ್ನ ಗಮನ. ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ. ಅದನ್ನು ಸರಿದಾರಿಗೆ ತರುವ ಮೂಲಕ ಹಿಂದಿನ 14 ತಿಂಗಳ ಸರ್ಕಾರಕ್ಕೂ ನಮ್ಮ ಸರ್ಕಾರಕ್ಕೂ ಏನು ವ್ಯತ್ಯಾಸ ಎಂಬುದನ್ನು ನಾಲ್ಕೈದು ತಿಂಗಳಲ್ಲಿ ಮಾಡಿ ತೋರಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡು ತ್ತೇವೆ ಎಂದರು.
ಬರಗಾಲದಿಂದ ರೈತರು ಸಂಕಷ್ಟಕ್ಕೆ ಈಡಾಗಿದ್ದಾರೆ. ರಾಜ್ಯದ ರೈತರಿಗೆ ನನ್ನ ಮೊದಲ ಆದ್ಯತೆ. ನೇಕಾರರು, ಮೀನುಗಾರರು, ಕೃಷಿ ಕಾರ್ವಿುಕರ ಸಂಕಷ್ಟಕ್ಕೆ ಸ್ಪಂದಿಸಲು ವಿಶೇಷ ಗಮನ ಕೊಡುತ್ತೇನೆ ಎಂದು ಹೇಳಿದರು.
“ಜುಲೈ 29ರಂದು ವಿಧಾನ ಮಂಡಲ ಅಧಿವೇಶನ ಕರೆಯಲು ತೀರ್ಮಾನ ಮಾಡಿದ್ದೇವೆ. ಅಂದು ಬೆಳಗ್ಗೆ 10 ಗಂಟೆಗೆ ಅಧಿವೇಶನ ಆರಂಭವಾಗಲಿದೆ. ಅಂದು ವಿಶ್ವಾಸಮತ ಸಾಬೀತು ಮಾಡುತ್ತೇವೆ” ಎಂದು ತಿಳಿಸಿದರು. ಜುಲೈ 29ರಂದು ಸೋಮವಾರ ವಿಧಾನ ಮಂಡಲದ ಕಲಾಪ ನಡೆಸುತ್ತೇವೆ. ರೈತರ ಸಾಲಮನ್ನಾ ಬಗ್ಗೆ ಮಾಹಿತಿ ಪಡೆದು ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇನೆ” ಎಂದು ಸ್ಪಷ್ಟಪಡಿಸಿದರು
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಬಡರೈತರಿಗೆ ಆರು ಸಾವಿರ ರೂ.ಗಳನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತಿದೆ. ಇದರ ಜತೆಗೆ ರಾಜ್ಯ ಸರ್ಕಾರದಿಂದ ಎರಡು ಕಂತುಗಳಲ್ಲಿ 4 ಸಾವಿರ ನೀಡಲು ತೀರ್ವನಿಸಲಾಗಿದೆ ಎಂದು ಹೇಳಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…