ಬೆಂಗಳೂರು: ಶೋಭಾ ಕರಂದ್ಲಾಜೆ ಸಿಎಂ ಆಗ್ತಾರೆ? ರಾಜ್ಯ ರಾಜಕೀಯಕ್ಕೆ ಮರಳುತ್ತಾರೆ ಎಂಬ ಚರ್ಚೆಗೆ ಸ್ವತಃ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಫುಲ್ ಸ್ಟಾಪ್ ಹಾಕಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯ ರಾಜಕೀಯಕ್ಕೆ ಮರಳೋದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಶೋಭಾ ಕರಂದ್ಲಾಜೆ ರಾಜ್ಯ ರಾಜಕೀಯಕ್ಕೆ ಬರುತ್ತಾರಾ ಎಂಬ ಚರ್ಚೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾನು ರಾಜ್ಯ ರಾಜಕೀಯಕ್ಕೆ ವಾಪಸ್ ಬರೋದಿಲ್ಲ. ನರೇಂದ್ರ ಮೋದಿ ಅವರು ನನಗೆ ಕೃಷಿ ಇಲಾಖೆ ಜವಾಬ್ದಾರಿ ಕೊಟ್ಟಿದ್ದಾರೆ. ಅನೇಕ ರಾಜ್ಯಗಳಲ್ಲಿ ಚುನಾವಣೆ ಉಸ್ತುವಾರಿಯನ್ನು ನನಗೆ ಕೊಟ್ಟಿದ್ದಾರೆ. ನಾನು ಇದ್ರಲ್ಲಿ ಖುಷಿಯಾಗಿ ಇದ್ದೇನೆ ಎಂದರು.
ನಾನು ರಾಜ್ಯಕ್ಕೆ ವಾಪಸ್ ಬರುತ್ತೇನೆ ಅನ್ನೋ ಚರ್ಚೆಯೇ ಆಗಿಲ್ಲ. ಇದು ಆಧಾರವಿಲ್ಲದ ಚರ್ಚೆ ಅಂದರು. ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಪಕ್ಷ ನನಗೆ ಜವಾಬ್ದಾರಿ ಕೊಟ್ಟಿದೆ. ಅದನ್ನ ನಿಭಾಯಿಸಿಕೊಂಡು ಹೋಗುತ್ತೇನೆ. ರಾಜ್ಯಕ್ಕೆ ಮತ್ತೆ ವಾಪಸ್ ಆಗೋದಿಲ್ಲ ಎಂದು ತಿಳಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…